ಕಾಂಗ್ರೆಸ್‌ ಸರ್ಕಾರದ ಲೋಪದಿಂದ ಭದ್ರಾಗೆ ಹಣ ಇಲ್ಲ: ದೇವರಾಜ್‌ ಶೆಟ್ಟಿ

KannadaprabhaNewsNetwork |  
Published : Feb 04, 2026, 02:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ನೀಡದಿರುವುದಕ್ಕೆ ರಾಜ್ಯ ಸರ್ಕಾರ ಲೋಪಗಳೇ ಕಾರಣ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ ಆರೋಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ನೀಡದಿರುವುದಕ್ಕೆ ರಾಜ್ಯ ಸರ್ಕಾರ ಲೋಪಗಳೇ ಕಾರಣ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭದ್ರಾ ಮೇಲ್ಡಂಡೆ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ದೋಷಗಳಿರುವುದರಿಂದ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲಿದ್ದು, ಆಗ ಈ ಎಲ್ಲ ಸಮಸ್ಯೆ ಪರಿಹಾರವಾಗಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬೇಲೂರು- ಚಿಕ್ಕಮಗಳೂರು ಹೆದ್ದಾರಿ ಕಾಮಗಾರಿ ಸೇರಿದಂತೆ ಮೊದಲಾದ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದ ಸಚಿವ ನಿತಿನ್‌ ಗಡ್ಕರಿ ಅನುದಾನ ನೀಡುವ ಹಾಗೂ ಶೃಂಗೇರಿ- ಚಿಕ್ಕಮಗಳೂರು ಹೆದ್ದಾರಿ ಕಾಮಗಾರಿ ₹50 ಕೋಟಿ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಇನ್ನೂ ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಆತ್ಮನಿರ್ಭರತೆ, ವಿಕಸಿತ ಭಾರತ, ಸ್ಥಿರ ಅಭಿವೃದ್ಧಿಯೊಂದಿಗೆ ಸ್ವಾವಲಂಬನೆ ಗುರಿಯಾಗಿಸಿಕೊಂಡು ಉದ್ಯೋಗ ಸೃಷ್ಟಿ, ಕೃಷಿ ಉತ್ಪಾದಕತೆ ಹೆಚ್ಚಿಸಲು ಕೇಂದ್ರ ಸರ್ಕಾರ ಬಜೆಟ್‌ಗೆ ಒತ್ತುನೀಡಿದೆ. ಬಜೆಟ್ ಸರ್ವಸ್ಪರ್ಶಿ ಜನಪರ ಬಜೆಟ್ ಆಗಿದೆ. ಆರ್ಥಿಕ ಬೆಳವಣಿಗೆ ವೇಗಗೊಳಿಸಿ ಜನರ ಆಶಯ ಈಡೇರಿಸುವುದು ಮತ್ತು ಆಡಳಿತದಲ್ಲಿ ಕೃತಕ ಬುದ್ದಿಮತ್ತೆಯಂತಹ ಸುಧಾರಿತ ತಂತ್ರ ಜ್ಞಾನ ಬಳಸುವುದು ಬಜೆಟ್‌ನ ಆಧಾರ ಸ್ಥಂಭ ಎಂದರು.

ಅಸ್ಥಿರ ಜಾಗತಿಕ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶೇ.7 ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಿದೆ. 2026-27ರ ವೇಳೆಗೆ ವಿತ್ತೀಯ ಕೊರತೆ ಜಿಡಿಪಿ ಶೇ.4.3ಕ್ಕೆ ಇಳಿಸಲಾಗಿದೆ. ಸಾಲ ಮತ್ತು ಜಿಡಿಪಿ ಅನುಪಾತ ಶೇ.55.6ಕ್ಕೆ ಇಳಿಸಲಾಗಿದೆ. 2030-31ರ ವೇಳೆಗೆ ಇದನ್ನು ಶೇ.50ರಷ್ಟು ಗುರಿ ತಲುಪಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕ್ಯಾನ್ಸರ್ ಸೇರಿದಂತೆ 17 ಔಷಧಗಳ ಮೇಲಿನ ಕಸ್ಟಮ್ ಸುಂಕ ರದ್ದುಗೊಳಿಸಿ 7 ಅಪರೂಪದ ಕಾಯಿಲೆಗಳ ಮೇಲಿನ ಆಮದು ಸುಂಕ ವಿನಾಯಿತಿ ಮುಂದುವರಿಸಲಾಗಿದೆ. ತೆಂಗು, ಕಾಫಿ, ಶ್ರೀಗಂಧ ಮುಂತಾದ ತೋಟಗಾರಿಕೆ ಬೆಳೆಗಳ ಪುನಶ್ಚೇತನಕ್ಕೆ ಒತ್ತುನೀಡಿ ರೈತರಿಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಶ್ಲಾಘಿಸಿದರು.

ಈ ವೇಳೆ ನಗರ ಬಿಜೆಪಿ ಮಂಡಲ ಅಧ್ಯಕ್ಷ ಪುಷ್ಪರಾಜು, ವಕ್ತಾರ ಎಚ್.ಎಸ್ ಪುಟ್ಟಸ್ವಾಮಿ, ಉಪಾಧ್ಯಕ್ಷ ರತನ್, ಕೌಶಿಕ್ ಉಪಸ್ಥಿತರಿದ್ದರು.

--ಬಾಕ್ಸ್‌--

ಪಕ್ಷದ ಹಿರಿಯ ಸಲಹೆ ಪಡೆದು ಕ್ರಮ

ಚಿಕ್ಕಮಗಳೂರು ಖಾಸಗಿ ಹೋಂ ಸ್ಟೇ ನಲ್ಲಿ ಇತ್ತೇಚೆಗೆ ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್‌ನ ಮೇಲೆ ತಮ್ಮದೇ ಬಿಜೆಪಿ ಪಕ್ಷದ ಮತ್ತೊಂಬ ಮುಖಂಡ ಸತೀಶ್‌ (ಪಾಪಣ್ಣ) ಗುಂಪುಗೂಡಿ ಹಲ್ಲೆ ನಡೆಸಿದ ಬಗ್ಗೆ ಪಕ್ಷದ ಹಿರಿಯರ ಗಮನಕ್ಕೆ ತಂದು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್‌ ಶೆಟ್ಟಿ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಳವಿ ಮಹಾರಥೋತ್ಸವ ಸಂಪನ್ನ
ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ: ಹರಿಹರಪುರ ಶ್ರೀ