ಬಸ್ ನಿಲ್ದಾಣದಲ್ಲಿ ಭದ್ರಾ ಮೇಲ್ದಂಡೆ ಜಾಗೃತಿ

KannadaprabhaNewsNetwork |  
Published : Feb 08, 2024, 01:36 AM IST
ಚಿತ್ರದುರ್ಗ ನಾಲ್ಕನೇ ಪುಟದ ಲೀಡ್  ಪೂರಕ ಮತ್ತೊಂದು ಸುದ್ದಿ  | Kannada Prabha

ಸಾರಾಂಶ

ಭದ್ರಾಮೇಲ್ದಂಡೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರು. ನೀಡುವುದಾಗಿ ಹೇಳಿದ ಕೇಂದ್ರ ಸರ್ಕಾರ ಜಿಲ್ಲೆಯ ಜನರನ್ನು ವಂಚಿಸಿದೆ. ಒಂದು ವರ್ಷವಾದರೂ ಇನ್ನು ಹಣ ಬಿಡುಗಡೆಗೊಳಿಸಿಲ್ಲ ಎಂದು ರೈತರ ಆರೋಪ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭದ್ರಾಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರು. ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಕಳೆದ ಮೂರು ದಿನಗಳಿಂದ ಜಿಲ್ಲಾ ಪಂಚಾಯಿತಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿರುವ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬುಧವಾರ ಕೆಎಸ್‌ಆರ್‌ಟಿಸಿ ಬಸ್‍ನಿಲ್ದಾಣದಲ್ಲಿ ಸಭೆ ನಡೆಸಿ ಭದ್ರಾಮೇಲ್ದಂಡೆ ಯೋಜನೆ ವಿಳಂಭವಾಗುತ್ತಿರುವುದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೊಳಲ್ಕೆರೆ ಅಧ್ಯಕ್ಷ ರಂಗಸ್ವಾಮಿ ಮಾತನಾಡಿ, ಭದ್ರಾಮೇಲ್ದಂಡೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರು. ನೀಡುವುದಾಗಿ ಹೇಳಿದ ಕೇಂದ್ರ ಸರ್ಕಾರ ಜಿಲ್ಲೆಯ ಜನರನ್ನು ವಂಚಿಸಿದೆ. ಒಂದು ವರ್ಷವಾದರೂ ಇನ್ನು ಹಣ ಬಿಡುಗಡೆಗೊಳಿಸಿಲ್ಲ. ಮೂವತ್ತು ವರ್ಷಗಳಿಂದಲೂ ನೀರಾವರಿಗಾಗಿ ಜಿಲ್ಲೆಯ ರೈತರು ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ಬರೀ ಆಶ್ವಾಸನೆ ನೀಡುತ್ತಲೆ ವಂಚಿಸಿಕೊಂಡು ಬರುತ್ತಿವೆ. ಇನ್ನೆರಡು ಮೂರು ದಿನಗಳಲ್ಲಿ ಹಣ ಬಿಡುಗಡೆಗೊಳಿಸಿ ಭದ್ರಾಮೇಲ್ದಂಡೆ ಕಾಮಗಾರಿಗೆ ಚುರುಕಿನ ಚಾಲನೆ ನೀಡದಿದ್ದರೆ ದನ-ಕರುಗಳನ್ನು ತಂದು ಜಿಲ್ಲಾ ಪಂಚಾಯಿತಿಯಲ್ಲಿರುವ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಕಚೇರಿ ಮುಂದೆ ಕಟ್ಟಲಾಗುವುದೆಂದು ಎಚ್ಚರಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ಕಾರ್ಯದರ್ಶಿ ರಾಮರೆಡ್ಡಿ, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಸತೀಶ್, ಟಿ.ಎಮ್ಮಿಗನೂರು ಜಯಣ್ಣ, ಅನ್ನಪೂರ್ಣ, ತುಳಜಮ್ಮ, ಚಂದ್ರಮೌಳಿ, ನಿರಂಜನಮೂರ್ತಿ ಇನ್ನು ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ