ಕೆದಕಲ್ ಗ್ರಾಮದ ಭದ್ರಕಾಳೇಶ್ವರಿ ದೇವಾಲಯ ವಾರ್ಷಿಕೋತ್ಸವ

KannadaprabhaNewsNetwork |  
Published : Mar 16, 2025, 01:47 AM IST
ಚಿತ್ರ.1: ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು.2 ದೇವಿಗೆ ಅಲಂಕಾರಗೊಳಿಸಿರುವುದು  | Kannada Prabha

ಸಾರಾಂಶ

ಕೆದಕಲ್‌ ಗ್ರಾಮದ ಭದ್ರಕಾಳೇಶ್ವರಿ ದೇವಾಲಯದ 25 ನೇ ವಾರ್ಷಿಕ ಉತ್ಸವ ಸಂಪನ್ನ ಗೊಂಡಿತು. ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೆದಕಲ್ ಗ್ರಾಮದ ಭದ್ರಕಾಳೇಶ್ವರಿ ದೇವಾಲಯದ 25ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು.

ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಬುಧವಾರ ದೇವಾಲಯದ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಿದರು.

ನಂತರ ಕುಂಭಾಭಿಷೇಕ ಮತ್ತು ಕಳಶ ಪೂಜೆ, ಹೂವಿನ ಪೂಜೆ, ಕುಂಕುಮಾರ್ಚನೆ ನಡೆಯಿತು. ನಂತರ ನೆರೆದಿದ್ದ ಭಕ್ತರಿಗೆ ದೇವಿಯ ದರ್ಶನ ದೊರೆತು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಮಾಡಿಕೊಂಡರಲ್ಲದೇ ಹರಕೆಯನ್ನು ಒಪ್ಪಿಸಿದರು.

ಮದ್ಯಾಹ್ನ 12 ಗಂಟೆಗೆ ವಿಶೇಷ ಪೂಜೆ, ಆರಾಧನೆ, ಮಹಾಪೂಜೆ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ನಂತರ ನೆರೆದಿದ್ದ ನೂರಾರು ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ದೇವಾಲಯ ಸಮಿತಿಯ ಅಧ್ಯಕ್ಷ ಸಿ.ಎ.ಕರುಂಬಯ್ಯ, ಕಾರ್ಯದರ್ಶಿ ಕೆ.ಎಂ.ಸತೀಶ್, ತಕ್ಕ ಮುಖ್ಯಸ್ಥರಾದ ಪುಲ್ಲೇರ ತಿಮ್ಮಯ್ಯ, ಪುಲ್ಲೇರ, ಕಾಳಪ್ಪ, ಪಿ.ಬಿ.ವಸಂತ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

ಕೆದಕಲ್, ಬೋಯಿಕೇರಿ, ಹಾಲೇರಿ, ಕಾಂಡನಕೊಲ್ಲಿ, ಸುಂಟಿಕೊಪ್ಪ, ಬಾಳೆಕಾಡು, ಮಡಿಕೇರಿ, ಹೊರೂರು ಸೇರಿದಂತೆ ಹೊರ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಧಾರ್ಮಿಕ ಕಾರ್ಯಗಳನ್ನು ಭಕ್ತಿಯಿಂದ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ