ಭಗವದ್ಗೀತಾ ಅಭಿಯಾನ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

KannadaprabhaNewsNetwork |  
Published : Dec 04, 2024, 12:30 AM IST
ಹುಬ್ಬಳ್ಳಿಯ ಗೋಕುಲ ರಸ್ತೆಯ ಹವ್ಯಕ ಭವನದಲ್ಲಿ ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಭಗವದ್ಗಿತಾ ಅಭಿಯಾನ ಧಾರವಾಡ ಜಿಲ್ಲಾ ಸಮಿತಿ ಆಶ್ರಯದಲ್ಲಿ ಭಾನುವಾರ ಭಗವದ್ಗೀತೆ ಕುರಿತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. | Kannada Prabha

ಸಾರಾಂಶ

ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಭಗವದ್ಗಿತಾ ಅಭಿಯಾನದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹುಬ್ಬಳ್ಳಿ:

ಇಲ್ಲಿನ ಗೋಕುಲ ರಸ್ತೆಯ ಹವ್ಯಕ ಭವನದಲ್ಲಿ ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಭಗವದ್ಗಿತಾ ಅಭಿಯಾನ ಧಾರವಾಡ ಜಿಲ್ಲಾ ಸಮಿತಿ ಆಶ್ರಯದಲ್ಲಿ ಭಾನುವಾರ ಭಗವದ್ಗೀತೆ ಕುರಿತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.

ಪ್ರಾಥಮಿಕ ವಿಭಾಗ ಭಾಷಣ ಸ್ಪರ್ಧೆಯಲ್ಲಿ ಸಾನಿಧ್ಯ ಸಂಜೀವ ಪ್ರಥಮ, ನರಸಿಂಹ ಬೆಳಗಾವಕರ್ ದ್ವಿತೀಯ, ಭುವನ‌ ಪಿ.ಬಿ. ಪ್ರೌಢಶಾಲಾ ವಿಭಾಗದಲ್ಲಿ ರವಿಕಿರಣ ಭಟ್ ಪ್ರಥಮ, ಸಾಕ್ಷಿ ಕುಲಕರ್ಣಿ ದ್ವಿತೀಯ, ಶ್ರೇಯಸ್ ಬಾರಕೇರ ತೃತೀಯ ಸ್ಥಾನ ಪಡೆದರು.

ಕಂಠಪಾಠ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಶ್ರದ್ಧಾ ಶಾನಭಾಗ್ ಪ್ರಥಮ, ಪರಿಮಳಾ ಜೋಶಿ ದ್ವಿತೀಯ, ವತ್ಸಾ ಎಸ್., ತೃತೀಯ. ಪ್ರೌಢಶಾಲಾ ವಿಭಾಗದಲ್ಲಿ ಅಂಕಿತ ರಾಮದುರ್ಗ ಪ್ರಥಮ, ಕಾರ್ತಿಕ ಕೆ., ದ್ವಿತೀಯ, ಅರ್ಜುನ್ ಪಿ., ತೃತೀಯ ಸ್ಥಾನ ಪಡೆದರು.ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಷ್ಟ್ರೋತ್ಥಾನದ ವೀರರಾಜ ಕೆ, ದಾನೇಶ ಎಂ.ವಿ, ಎಸ್‌.ಆರ್. ಬೊಮ್ಮಾಯಿ ರೋಟರಿ ಸ್ಕೂಲ್‌ನ ರುಕ್ಮಿಣಿ ಸಾಲಗುಂದಿ, ಅಧಿತಿ ಕುಲಕರ್ಣಿ, ಭಾವದೀಪದ ಶ್ರಾವಣಿ ಕುಲಕರ್ಣಿ, ಮಾನಸಿ ಗಿರೀಶ ಹಿರೇಮಠ ವಿಜೇತರಾದರು.

ವಿಜೇತ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಅಭಿಯಾನ ಸಮಿತಿ ಪದಾಧಿಕಾರಿಗಳಾದ ಅರವಿಂದ ಮುತ್ತಗಿ, ಗೋಪಾಲಕೃಷ್ಣ ಹೆಗಡೆ, ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ವಿ.ಎಂ. ಭಟ್ ಪ್ರಮಾಣಪತ್ರ ವಿತರಿಸಿದರು. ವೀಣಾ ಶಿವರಾಮ ಹೆಗಡೆ ಕಾರ್ಯಕ್ರಮ ನಡೆಸಿಕೊಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌