ಏಕಾಗ್ರತೆಗೆ, ಕರ್ತವ್ಯ ಅರಿಯಲು ಭಗವದ್ಗೀತೆ ಮಾರ್ಗದರ್ಶಿ: ಮುರಳೀಧರ ಪ್ರಭು

KannadaprabhaNewsNetwork |  
Published : Nov 03, 2025, 02:30 AM IST
ಫೋಟೋ : ೨ಕೆಎಂಟಿ_ಎನ್‌ಒವಿ_ಕೆಪಿ೨ : ಮಿರ್ಜಾನಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಭಗವದ್ಗೀತಾ ಅಭಿಯಾನವನ್ನು ಗಣ್ಯರು ಉದ್ಘಾಟಿಸಿದರು. ಮುರಳೀಧರ ಪ್ರಭು, ರಮೇಶ ಉಪಾಧ್ಯಾಯ, ಎಂ.ಟಿ.ಗೌಡ, ಅರ್ಚನಾ ಭಟ್, ಗಣೇಶ ಭಟ್ ಇತರರು ಇದ್ದರು. | Kannada Prabha

ಸಾರಾಂಶ

ದೈನಂದಿನ ಜೀವನದಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಪಠಣ ಮತ್ತು ಅದರ ತಾತ್ಪರ್ಯ ತಿಳಿದುಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ.

ತಾಲೂಕಾ ಭಗವದ್ಗೀತಾ ಅಭಿಯಾನ ಉದ್ಘಾಟಿಸಿದ ಭಗವದ್ಗೀತಾ ಅಭಿಯಾನ ಸಮಿತಿಯ ಜಿಲ್ಲಾಧ್ಯಕ್ಷ

ಕನ್ನಡಪ್ರಭ ವಾರ್ತೆ ಕುಮಟಾ

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆ ಉಂಟಾಗಲು, ಜೀವನ ಹೇಗೆ ನಿರ್ವಹಣೆ ಮಾಡಬೇಕು, ನಮ್ಮ ಕರ್ತವ್ಯಗಳೇನು ಎಂಬುದನ್ನು ಅರಿಯಲು ಇಂದಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪಠಣ ಅತ್ಯವಶ್ಯಕ ಎಂದು ಭಗವದ್ಗೀತಾ ಅಭಿಯಾನ ಸಮಿತಿಯ ಜಿಲ್ಲಾಧ್ಯಕ್ಷ ಮುರಳೀಧರ ಪ್ರಭು ಹೇಳಿದರು.

ಮಿರ್ಜಾನದ ಬಿಜಿಎಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಆಶ್ರಯದಲ್ಲಿ ಇತ್ತೀಚೆಗೆ ತಾಲೂಕಾ ಭಗವದ್ಗೀತಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಬಿಜಿಎಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಭಗವದ್ಗೀತೆ ಶ್ಲೋಕ ಕಲಿಸುತ್ತಿರುವುದು ಶ್ಲಾಘನೀಯ ಎಂದರು.

ಪ್ರಾಸ್ತಾವಿಕ ಮಾತನಾಡಿದ ಬಿಜಿಎಸ್ ಶೈಕ್ಷಣಿಕ ನಿರ್ದೇಶಕ ಎಂ.ಟಿ. ಗೌಡ, ಭಗವದ್ಗೀತೆಯ ಕರ್ಮ ಯೋಗ, ಭಕ್ತಿ ಯೋಗ ಮತ್ತು ಜ್ಞಾನ ಯೋಗದ ಮಹತ್ವ ವಿವರಿಸಿದರು.

ಭಗವದ್ಗೀತಾ ಅಭಿಯಾನ ಸಮಿತಿಯ ತಾಲೂಕಾಧ್ಯಕ್ಷ ರಮೇಶ ಉಪಾಧ್ಯಾಯ, ದೈನಂದಿನ ಜೀವನದಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಪಠಣ ಮತ್ತು ಅದರ ತಾತ್ಪರ್ಯ ತಿಳಿದುಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ ಎಂದರು.

ನೆಲ್ಲಿಕೇರಿ ಹನುಮಂತ ಬೆಣ್ಣೆ ಸರ್ಕಾರಿ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕ ಗಣೇಶ ಭಟ್ ಭಗವದ್ಗೀತೆ ಪಠನ ನಡೆಸಿಕೊಟ್ಟರು. ಸಮಿತಿಯ ಉಪಾಧ್ಯಕ್ಷೆ ಸುಧಾ ಶಾನಭಾಗ, ಬಿಜಿಎಸ್ ಪ್ರಾಚಾರ್ಯೆ ಅರ್ಚನಾ ಭಟ್, ಉಪಪ್ರಾಚಾರ್ಯೆ ಅನುರಾಧ ಗುನಗ, ಶಿಕ್ಷಕ ಎಂ.ಜಿ. ಹಿರೇಕುಡಿ ಇನ್ನಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರತಿನಿಧಿ ಕೃಷ್ಣ ಪ್ರಸಾದ ಶಂಖನಾದದೊಂದಿಗೆ ಗೀತೋಪದೇಶ ಮಾಡಲಾಯಿತು. ಚಿರಾಗ್ ಸಂಗಡಿಗರು ವೇದಘೋಷಗೈದರು. ಕೃತಿಕಾ ಸಂಗಡಿಗರು ಪ್ರಾರ್ಥಿಸಿದರು. ನಕುಲ್ ಪೈ, ಪ್ರಥ್ವಿ ಪ್ರಭು, ಮಾನ್ಯತಾ, ವಿರಾಜ್ ಸಂಪೂರ್ಣ ಕಾರ್ಯಕ್ರಮವನ್ನು ಸಂಸ್ಕೃತ ಶಿಕ್ಷಕಿ ಸುಮಂಗಲಾ ವೈದ್ಯ ಮಾರ್ಗದರ್ಶನದಲ್ಲಿ ಸಂಸ್ಕೃತದಲ್ಲೇ ನಿರ್ವಹಿಸಿ ಗಮನಸೆಳೆದರು.

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ