ಸಕಲೇಶಪುರದಲ್ಲಿ ಭಗೀರಥ ಸಮುದಾಯ ಭವನ ಕಾಮಗಾರಿಗೆ ಭೂಮಿಪೂಜೆ

KannadaprabhaNewsNetwork |  
Published : Apr 24, 2026, 12:30 AM IST
23ಎಚ್ಎಸ್ಎನ್13 :  | Kannada Prabha

ಸಾರಾಂಶ

ಈ ಭಗೀರಥ ಸಮುದಾಯ ಭವನ ನಿರ್ಮಾಣವು ಸ್ಥಳೀಯ ನಿವಾಸಿಗಳಿಗೆ ವಿವಿಧ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಹಲವು ವರ್ಷಗಳಿಂದ ಸಮುದಾಯದವರು ಭವನದ ಪೂರ್ಣಗೊಳಿಸುವಿಕೆಯನ್ನು ನಿರೀಕ್ಷಿಸುತ್ತಿದ್ದು, ಇದೀಗ ಕಾಮಗಾರಿಗೆ ಮತ್ತೆ ವೇಗ ಸಿಗುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾದ ಅನುದಾನದಡಿ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಪಟ್ಟಣದ ಕುಶಾಲನಗರ ಬಡಾವಣೆ (ವಾರ್ಡ್ ೯)ಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ೫ ಲಕ್ಷ ರುಪಾಯಿ ವೆಚ್ಚದಲ್ಲಿ ಭಗೀರಥ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮವನ್ನು ಸ್ಥಳೀಯ ಶಾಸಕ ಸಿಮೆಂಟ್ ಮಂಜು ನೆರವೇರಿಸಿದರು.

ಈ ಭಗೀರಥ ಸಮುದಾಯ ಭವನ ನಿರ್ಮಾಣವು ಸ್ಥಳೀಯ ನಿವಾಸಿಗಳಿಗೆ ವಿವಿಧ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಹಲವು ವರ್ಷಗಳಿಂದ ಸಮುದಾಯದವರು ಭವನದ ಪೂರ್ಣಗೊಳಿಸುವಿಕೆಯನ್ನು ನಿರೀಕ್ಷಿಸುತ್ತಿದ್ದು, ಇದೀಗ ಕಾಮಗಾರಿಗೆ ಮತ್ತೆ ವೇಗ ಸಿಗುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾದ ಅನುದಾನದಡಿ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸ್ಥಳೀಯರು ಸಹ ಕಾಮಗಾರಿಗೆ ಸಹಕಾರ ನೀಡಿ, ಭವನವನ್ನು ಸಮುದಾಯದ ಒಗ್ಗಟ್ಟಿನ ಸಂಕೇತವಾಗಿ ರೂಪಿಸಬೇಕೆಂದು ಕರೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಹಿರಿಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾಮಗಾರಿಯ ಯಶಸ್ಸಿಗಾಗಿ ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗೀರಥ ಮಹರ್ಷಿಗಳ ದೃಢ ಪ್ರಯತ್ನ ಎಲ್ಲರಿಗೂ ಸ್ಫೂರ್ತಿ
ಕುಡಿವ ನೀರಿನ ಘಟಕ ದುರಸ್ತಿಗೆ ಬಂದ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗೆ ಗ್ರಾಮಸ್ಥರ ಅಡ್ಡಿ