ಕನ್ನಡಪ್ರಭ ವಾರ್ತೆ ಹಾಸನ
ಮುಡಾ ಮಾಜಿ ಆಯುಕ್ತರ ಅಮಾನತು ಸರಿಯಾಗಿದೆ: ಈ ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ಅಮಾನತು ಪ್ರಕರಣದ ಕುರಿತಾಗಿ ಮಾತನಾಡುತ್ತಾ, ಆಯುಕ್ತ ದಿನೇಶ್ ತಪ್ಪು ಮಾಡಿದ್ದ ಹಾಗಾಗಿ ಅಮಾನತು ಮಾಡಲಾಗಿದೆ. ಅವನ ಅಮಾನತು ಸರಿಯಾಗಿದೆ. ದೇವರಾಜ್ ಇಲ್ಲಾ, ಅವನಿಗೆ ಜಮೀನೇ ಬಂದಿಲ್ಲ. ಅವನಿಗೆ ನಕಲಿ ದಾಖಲೆ ಮಾಡಲಾಗಿದೆ ಎಂದು ವಾದ ಮಾಡಲಾಗಿದೆ. ನನ್ನ ಬಳಿಯೇ ದಾಖಲೆ ಇದೆ. ದೇವರಾಜ್ಗೆ ಅಧಿಕಾರ ಕೊಟ್ಟಿರೋದು ಅವನ ಮಕ್ಕಳು. ಜವರ ಬಿನ್ ನಿಂಗನ ಮಕ್ಕಳು ದಾಖಲೆ ಮಾಡಿಕೊಟ್ಟಿದ್ದಾರೆ. ಹಾಗಾಗಿ ೧೯೯೨ರವರೆಗೆ ಮೈಲಾರಯ್ಯನ ಬಳಿ ಇತ್ತು. ನಂತರ ಮೂರನೆ ಮಗ ದೇವರಾಜ್ಗೆ ಬಂದಿದೆ. ಆ ವಿರೋಧ ಪಕ್ಷದ ಲಾಯರ್ ಎಲ್ಲಾ ಒಳ್ಳೆ ಪಾಯಿಂಟ್ ಬಿಟ್ಟಿದ್ದಾರೆ. ಬರೇ ದೇವರಾಜ್ಗೆ ಜಮೀನೇ ಬಂದಿಲ್ಲ ಎಂದು ಹೇಳಿದ್ದಾರೆ ಎಂದು ಮುಡಾ ಹಗರಣದ ದೂರುದಾರರ ಪರ ವಕೀಲರ ವಾದದ ಬಗ್ಗೆ ಲೇವಡಿ ಮಾಡಿದಂತಿತ್ತು.
ಜೀತ ಮಾಡ್ತೇನೆ: ಅಲ್ಲಿ ನಾವು ಹೋಗಿ ವಾದ ಮಾಡಲು ಆಗಲ್ಲ. ನಮ್ಮ ವಕೀಲರು ಮಾಡ್ತಾರೆ. ನಾನು ಸಂಪೂರ್ಣ ಕಡತ ಸ್ಟಡಿ ಮಾಡಿದೀನಿ. ಈಗಲೂ ಬಿಟ್ಟರೇ ನಾನೇ ಕೇಸ್ ಹೂಡುತೀನಿ ಎಂದ ಶಿವಲಿಂಗೇಗೌಡರು ನನ್ನೇ ವಾದ ಮಾಡಲು ಬಿಡಲಿ. ನಾನು ಕೇಸ್ ಗೆಲ್ಲದೆ ಹೋದರೆ ನಾನು ನಿಮ್ಮನೆ ಜೀತ ಮಾಡ್ತೇನೆ ಎಂದು ಸವಾಲು ಹಾಕಿದರು. ಮುಡಾದವರು ಜಮೀನೇ ಇಲ್ಲದೆ ಹೇಗೆ ಸ್ವಾಧೀನ ಮಾಡಿದ್ರು. ಅಲ್ಲಿ ಬರೀ ಸುಳ್ಳು ವಾದ ಮಾಡ್ತಾರೆ. ದೇವರಾಜ್ ಬಳಿ ಜಮಿನೇ ಇಲ್ಲದೆ ನೋಂದಣಿ ಹೇಗಾಯ್ತು? ಡಿಸಿ ಹೋಗಿ ಸ್ಥಳ ಮಹಜರ್ ಮಾಡಿ ಬಂದಿದ್ದಾರೆ. ಪಾರ್ವತಿ ಮೇಡಂಗೆ ಬಂದ ಮೇಲೆ ಸಿಎಂ ಏನು ಮಾಡಿದ್ದಾರೆ. ತಪ್ಪಾಗಿದ್ದರೆ ಏನು ಮಾಡ್ತಾ ಇದ್ದರು. ಕಮಿಟಿಯಲ್ಲಿ ಸಾ ರಾ ಮಹೇಶ್, ಜಿ ಟಿ ದೇವೇಗೌಡ, ರಾಮದಾಸ್ ಎಲ್ಲಾ ಇರಲಿಲ್ಲವೇ. ಅವರು ಹೇಗೆ ತೀರ್ಮಾನ ಮಾಡಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದರು.ಇವರೇನು ಶಾಸಕರಲ್ಲವಾ, ಯಾರೋ ಹೇಳಿದ್ರೆ ಮಾಡಿಬಿಡ್ತಾರಾ! ಸಿದ್ದರಾಮಯ್ಯ ಅವರ ಪತ್ನಿಗೆ ಭೂಮಿ ಕೊಟ್ಟರೆ ನಾವೆಲ್ಲ ಸಾವಿರಾರು ಜಾಗ ಹೊಡ್ಕೊಬಹುದು ಎಂದು ತೀರ್ಮಾನ ಮಾಡಿದ್ದಾರೆ. ತಾವು ಬೇಕಾದಷ್ಟು ಸೈಟ್ ಪಡೆಯಲು ಸಿಎಂ ಪತ್ನಿಗೆ ಸೈಟ್ ಕೊಡಲಾಗಿದೆ. ಅವರ ಹಣೇಬರ ಗೊತ್ತಾಗುತ್ತದೆ ತಡೀರಿ ಎಂದು ಹೇಳಿದರು. ಸಂಸದ ಶ್ರೇಯಸ್ ಎಂ. ಪಟೇಲ್ ಮಾತನಾಡಿ, ಸೆಪ್ಟಂಬರ್ ೬ರ ಶುಕ್ರವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಲೇಶಪುರ ತಾಲೂಕಿಗೆ ಆಗಮಿಸಿ ಎತ್ತಿನಹೊಳೆ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಮಲೆನಾಡು ಭಾಗದಲ್ಲಿ ನೀರು ಹರಿದು ಸಮುದ್ರಕ್ಕೆ ಹೋಗುತಿತ್ತು. ಇದನ್ನು ತಡೆದು ಬಯಲುಸೀಮೆ ಜಿಲ್ಲೆಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ರಾಜ್ಯ ಸರಕಾರದ ಉಪಮುಖ್ಯಮಂತ್ರಿಗಳು ನೀರಾವರಿ ಸಚಿವರಾದ ಮೇಲೆ ಸಭೆ ಮಾಡಿ ಅದರಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡು ಕಾಮಗಾರಿಗಳಿಗೆ ಇದ್ದ ತೊಡಕುಗಳಿಗೆ ಅವರು ತೆಗೆದುಕೊಂಡ ದಿಟ್ಟ ನಿರ್ಧಾರವೇ ಕಾರಣವಾಗಿದೆ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ. ಶಿವರಾಂ , ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ್, ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಎಚ್.ಕೆ. ಮಹೇಶ್, ಬನವಾಸೆ ರಂಗಸ್ವಾಮಿ, ಮುರಳಿ ಮೋಹನ್, ಪಟೇಲ್ ಶಿವಪ್ಪ, ಗೌಡಗೆರೆ ಪ್ರಕಾಶ್, ಶ್ರೀಧರ್ ಗೌಡ ಇತರರು ಇದ್ದರು.