ಭೈರನತ್ತ ಗ್ರಾಮದಲ್ಲಿ ನೀರಿಗೆ ಹಾಹಾಕಾರ!

KannadaprabhaNewsNetwork |  
Published : Feb 17, 2026, 01:45 AM IST
 ಕನ್ನಡಪ್ರಭ ವಾರ್ತೆ  ಹನೂರುಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಬೈರನತ್ತ ಗ್ರಾಮದಲ್ಲಿ ನಿವಾಸಿಗಳು ಶಿವರಾತ್ರಿ ಹಬ್ಬದ ಶುಭಾಶಯಗಳು ಪರದಾಡಿದ ಪ್ರಸಂಗ ಜರುಗಿದೆ . ಹನೂರು ತಾಲೂಕಿನ  ಮಣಗಳ್ಳಿ  ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈರನತ್ತ ಗ್ರಾಮದ ಪರಿಶಿಷ್ಟ ಪಂಗಡದ ಸಮುದಾಯ ವಾಸಿಸುವ 250ರಿಂದ 300 ಮನೆ ಇರುವ 1000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ ಗ್ರಾಮಸ್ಥರು ಜನಪ್ರತಿನಿಧಿ ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ... ನೀರಿಗಾಗಿ ನೀರಯರ ಪರಿಪಾಠಲು : ಬೈರನತ್ತ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ  ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಮನವಿಗೂ ಸಹ ಸ್ಪಂದಿಸದೆ ನಿರ್ಲಕ್ಷ ವಹಿಸಿರುವುದರಿಂದ ಮಹಾಶಿವರಾತ್ರಿ ಹಬ್ಬದ ದಿನ ಗ್ರಾಮದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡು ನೀರಿಗಾಗಿ ನೀರೆಯರು ತೊಂಬೆಗಳ ಮುಂದೆ ಗಂಟೆಗಟ್ಟಲೆ  ಗ್ರಾಮಸ್ಥರು ಪರದಾಡುವಂಥ ಪರಿಸ್ಥಿತಿ ಉಂಟಾಗಿದೆ ... ತಾಲೂಕು ಆಡಳಿತ ಇತ್ತ ಗಮನ ಹರಿಸಿ ನೀರಿನ ಸಮಸ್ಯೆ ಪರಿಹರಿಸಿ ಇಲ್ಲದಿದ್ದರೆ ಉಗ್ರವಾದ ಪ್ರತಿಭಟನೆ ಗ್ರಾಮಸ್ಥರ ಎಚ್ಚರಿಕೆ. ಕಳೆದ ಒಂದು ತಿಂಗಳಿನಿಂದ ಗ್ರಾಮದಲ್ಲಿರುವ ಬೋರ್ವೆಲ್ ಗಳಲ್ಲಿ ಮಳೆ ಇಲ್ಲದೆ ಅಂತರ್ಜಲ ಕುಷಿತಗೊಂಡಿರುವುದರಿಂದ  ನೀರಿನ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ನಿರಂತರವಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದರು ಮನವಿಗೆ ಸ್ಪಂದಿಸದೆ ನಿರ್ಲಕ್ಷಕ್ಕೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರದಾಡುವತ್ತ ಸ್ಥಿತಿ ಉಂಟಾಗಿದೆ ಹೀಗಾಗಿ ಕೂಡಲೇ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ . ಮನಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೈರನತ್ತ ಗ್ರಾಮದ ಸಮುದಾಯಗಳು ವಹಿಸುತ್ತಿರುವ ಕಾಲನಿಯಲ್ಲಿ ನೀರಿನ ಸಮಸ್ಯೆ ಉಂಟಾಗಿದೆ ಈ ಬಗ್ಗೆ ಹಲವಾರು ಬಾರಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಉಮೇಶ್ ಅವರಿಗೆ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದ್ದರು ಮನವಿಗೆ ಸ್ಪಂದಿಸದೆ ಕಳೆದ ಎರಡು ದಿನಗಳಿಂದ ಶಾಸಕ ಎಂಆರ್ ಮಂಜುನಾಥ್ ಸಹ ಪಟ್ಟಣದಲ್ಲಿ ಸಭೆ ನಡೆಸಿ ನೀರಿನ ಸಮಸ್ಯೆಗಳು ಇರುವ ಕಡೆ ಪರಿಹರಿಸುವಂತೆ ತಿಳಿಸಿದ್ದರೂ ಮಹಾಶಿವರಾತ್ರಿ ಹಬ್ಬದ ದಿನ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿ ಗ್ರಾಮಸ್ಥರು ಪರದಾಡುವಂತಾಗಿದೆ ಹೀಗಾಗಿ ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಡಳಿತ ಇತ್ತ ಗಮನ ಹರಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಚೇರಿ ಮುಂಭಾಗ ಗ್ರಾಮಸ್ಥರ ಜೊತೆಗೂಡಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ . ಮಾದೇಶ್  ಡಿಎಸ್ಎಸ್ ತಾಲೂಕು ಅಧ್ಯಕ್ಷ ... ಬೈರನತ್ತ ಗ್ರಾಮದಲ್ಲಿ ಇರುವ ಕಂಬಗಳಿಗೆ ನೀರು ಸಮರ್ಪಕವಾಗಿ ಹರಿಸಲು ಅಂತರ್ಜಲ ಕುಪಿತದಿಂದ ನೀರಿನ ಸಮಸ್ಯೆ ಉಂಟಾಗಿದೆ ಗ್ರಾಮಕ್ಕೆ ಭೇಟಿ ನೀಡಿದ್ದು ಇರುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೂ ಸಮಸ್ಯೆಯನ್ನು ತಿಳಿಸಲಾಗಿತ್ತು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು . ರಾಮು  ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಣಗಳ್ಳಿ ...Hnr, 1news, 1  ಹನೂರು ತಾಲೂಕಿನ ಮ ಣಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭರನತ್ತ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೊಂಬೆಗಳ ಮುಂದೆ ನೀರಿಗಾಗಿ ಪರದಾಟ ... | Kannada Prabha

ಸಾರಾಂಶ

ಹನೂರು ತಾಲೂಕಿನ ಮಣಗಳ್ಳಿ ಗ್ರಾಪಂ ವ್ಯಾಪ್ತಿಯ ಬೈರನತ್ತ ಗ್ರಾಮದ ಪರಿಶಿಷ್ಟ ಪಂಗಡದ ಸಮುದಾಯ ವಾಸಿಸುವ 250 ರಿಂದ 300 ಮನೆ ಇದ್ದು, 1000 ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಗ್ರಾಮಸ್ಥರು ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹನೂರು

ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದರಿಂದ ಬೈರನತ್ತ ಗ್ರಾಮಸ್ಥರು ಶಿವರಾತ್ರಿ ಹಬ್ಬದಲ್ಲಿ ನೀರಿಗಾಗಿ ಪರದಾಡಿದ ಪ್ರಸಂಗ ಜರುಗಿದೆ.

ಹನೂರು ತಾಲೂಕಿನ ಮಣಗಳ್ಳಿ ಗ್ರಾಪಂ ವ್ಯಾಪ್ತಿಯ ಬೈರನತ್ತ ಗ್ರಾಮದ ಪರಿಶಿಷ್ಟ ಪಂಗಡದ ಸಮುದಾಯ ವಾಸಿಸುವ 250 ರಿಂದ 300 ಮನೆ ಇದ್ದು, 1000 ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಗ್ರಾಮಸ್ಥರು ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರಿಗಾಗಿ ನೀರೆಯರ ಪರಿಪಾಠಲು:

ಬೈರನತ್ತ ಗ್ರಾಮದಲ್ಲಿ ಒಂದು ತಿಂಗಳಿನಿಂದ ನೀರಿನ ಸಮಸ್ಯೆ ತಲೆದೂರಿರುವ ಹಿನ್ನೆಲೆಯಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳಿಗೆ ನೀರಿನ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ್ದರೂ ಸಹ ಸ್ಪಂದಿಸದೆ ನಿರ್ಲಕ್ಷ ವಹಿಸಿರುವುದರಿಂದ ಮಹಾ ಶಿವರಾತ್ರಿ ಹಬ್ಬದ ದಿನ ಗ್ರಾಮದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡು ನೀರಿಗಾಗಿ ನೀರೆಯರು ತೊಂಬೆಗಳ ಮುಂದೆ ಗಂಟೆಗಟ್ಟಲೆ ಪರದಾಡುವಂಥ ಪರಿಸ್ಥಿತಿ ಉಂಟಾಗಿದೆ.

ತಾಲೂಕು ಆಡಳಿತ ಇತ್ತ ಗಮನ ಹರಿಸಿ ನೀರಿನ ಸಮಸ್ಯೆ ಪರಿಹರಿಸಿ ಇಲ್ಲದಿದ್ದರೆ ತಾಪಂ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಮನಗಳ್ಳಿ ಗ್ರಾಪಂ ವ್ಯಾಪ್ತಿಯ ಬೈರನತ್ತ ಗ್ರಾಮದ ಸಮುದಾಯಗಳು ವಾಸಿಸುತ್ತಿರುವ ಕಾಲೋನಿಯಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಹಲವಾರು ಬಾರಿ ತಾಪಂ ಇಒ ಉಮೇಶ್ ಅವರಿಗೆ ಮನವಿ ಸಲ್ಲಿಸಿದರೂ ಸೂಕ್ತ ಸ್ಪಂದನೆ ಇಲ್ಲ. ಕಳೆದ ಎರಡು ದಿನಗಳಿಂದ ಶಾಸಕ ಎಂ.ಆರ್.ಮಂಜುನಾಥ್ ಸಹ ಪಟ್ಟಣದಲ್ಲಿ ಸಭೆ ನಡೆಸಿ ನೀರಿನ ಸಮಸ್ಯೆಗಳು ಇರುವ ಕಡೆ ಪರಿಹರಿಸುವಂತೆ ತಿಳಿಸಿದ್ದರೂ ಮಹಾ ಶಿವರಾತ್ರಿ ಹಬ್ಬದ ದಿನ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿ ಗ್ರಾಮಸ್ಥರು ಪರದಾಡುವಂತಾಗಿದೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತಾಪಂ ಇಒ ಕಚೇರಿ ಮುಂಭಾಗ ಗ್ರಾಮಸ್ಥರ ಜೊತೆಗೂಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ.

- ಮಾದೇಶ್ , ಡಿಎಸ್ಎಸ್ ತಾಲೂಕು ಅಧ್ಯಕ್ಷ

ಬೈರನತ್ತ ಗ್ರಾಮದಲ್ಲಿ ಅಂತರ್ಜಲ ಕುಸಿತದಿಂದ ಸಮರ್ಪಕವಾಗಿ ನೀರು ಹರಿಸಲು ಸಮಸ್ಯೆ ಉಂಟಾಗಿದೆ. ಗ್ರಾಮಕ್ಕೆ ಭೇಟಿ ನೀಡಿದ್ದು ಇರುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೂ ಸಮಸ್ಯೆಯನ್ನು ತಿಳಿಸಲಾಗಿತ್ತು. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.

- ರಾಮು, ಪಿಡಿಒ ಮಣಗಳ್ಳಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವರಾತ್ರಿ ಪ್ರಯುಕ್ತ ಕಾಶಿಪುರ ಉತ್ಸವ ಭವ್ಯ ಆಚರಣೆ
ಚಾಮರಾಜನಗರ: ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ