ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟದಲ್ಲಿ ‘ಭಜನಾ ಸಂಸ್ಕೃತಿ ಬೆಳೆಸುವಲ್ಲಿ ಭಜನಾ ಮಂಡಳಿಗಳ ಪಾತ್ರ’ ಎಂಬ ವಿಷಯದ ಬಗ್ಗೆ ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಉಪನ್ಯಾಸ ನೀಡಿದರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಜೀವನ ಶಿಕ್ಷಣವನ್ನು ಕಲಿಸುವ ಭಜನೆಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ. ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಭಜನಾ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಹೇಳಿದರು.ಅವರು ಶನಿವಾರ ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟದಲ್ಲಿ ‘ಭಜನಾ ಸಂಸ್ಕೃತಿ ಬೆಳೆಸುವಲ್ಲಿ ಭಜನಾ ಮಂಡಳಿಗಳ ಪಾತ್ರ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.ಪ್ರತಿಯೊಬ್ಬ ಭಜಕನೂ ಒಂದು ಆಲಯವಿದ್ದಂತೆ. ಭಜನಾ ಕಮ್ಮಟದಲ್ಲಿ ಭಾಗವಹಿಸಿದ ಭಜಕರೆಲ್ಲರೂ ಭಜನಾ ಸಂಸ್ಕೃತಿಯ ಮೂಲಕ ಆಧ್ಯಾತ್ಮಿಕ ವಿಚಾರಧಾರೆಗಳನ್ನು ಪಸರಿಸುವ ರಾಯಭಾರಿಗಳಾಗಬೇಕು. ಮಕ್ಕಳಿಗೂ ಭಜನೆ ಕಲಿಸುವ ಮೂಲಕ ಅವರನ್ನು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ್ ಸಾಲ್ಯಾನ್, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಎ.ವಿ. ಶೆಟ್ಟಿ, ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಬಸ್ರೂರು, ಪದ್ಮರಾಜ್ ಜೈನ್, ಕೋಶಾಧಿಕಾರಿ, ಭಜನಾ ಕಮ್ಮಟ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ., ಅಳಿಯೂರು ಹಾಗೂ ರವೀಂದ್ರ ಕರ್ತವ್ಯ ನಿರ್ವಹಿಸಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಜಾ ಯೋಗೀಶ್ ಕಾರ್ಯಕ್ರಮ ನಿರ್ವಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.