ಭಕ್ತ ಕನಕದಾಸ, ಸಂತ ತುಕಾರಾಮ ಭಕ್ತಿ ಆಂದೋಲನದ ಹರಿಕಾರರು

KannadaprabhaNewsNetwork |  
Published : Nov 22, 2024, 01:17 AM IST
21ಎಚ್‌ಪಿಟಿ1- ಹಂಪಿ ಕನ್ನಡ ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ವಿಠಲರಾವ್ ಗಾಯಕವಾಡ ಅವರು ಕನಕದಾಸ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಭಕ್ತ ಕನಕದಾಸ ಮತ್ತು ಸಂತ ತುಕಾರಾಮ ಎನ್ನುವ ವಿಶೇಷ ಉಪನ್ಯಾಸ ನೀಡಿದ ಅವರು, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಇದು ಹಿಂದೂ ಧರ್ಮದ ವಿವಿಧ ಸಂಪ್ರದಾಯಗಳನ್ನು ಒಂದುಗೂಡಿಸಿ, ಭಕ್ತಿಯ ಮೂಲಕ ಏಕತೆಯನ್ನು ಸಾಧಿಸುವತ್ತ ಗಮನ ಹರಿಸಿದವು.

ಹೊಸಪೇಟೆ: ಭಾರತೀಯ ಭಕ್ತಿ ಪರಂಪರೆಯಲ್ಲಿ ಕನಕದಾಸ, ತುಕಾರಾಮ ಪ್ರಮುಖ ಸಂತರು. ಇವರ ಕೀರ್ತನೆಗಳು, ಅಭಂಗಗಳು ಭಕ್ತಿಯ ಆಳವಾದ ಅನುಭವ ನೀಡುತ್ತವೆ. ಇಬ್ಬರೂ ಸರಳ ಭಾಷೆಯಲ್ಲಿ ತಮ್ಮ ಭಾವನೆಗಳನ್ನು ವೈಚಾರಿಕ ತತ್ವದ ಮೂಲಕ ಪ್ರತಿಪಾದಿಸಿದರು ಎಂದು ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ವಿಠಲರಾವ್ ಗಾಯಕವಾಡ ಹೇಳಿದರು.

ಕನ್ನಡ ವಿಶ್ವವಿದ್ಯಾಲಯ ಹಾಲುಮತ ಅಧ್ಯಯನ ಪೀಠದ ವತಿಯಿಂದ ಕನಕದಾಸ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಭಕ್ತ ಕನಕದಾಸ ಮತ್ತು ಸಂತ ತುಕಾರಾಮ ಎನ್ನುವ ವಿಶೇಷ ಉಪನ್ಯಾಸ ನೀಡಿದ ಅವರು, ಕರ್ನಾಟಕದಲ್ಲಿ ದಾಸ ಚಳವಳಿ ಹಾಗೂ ಮಹಾರಾಷ್ಟ್ರದಲ್ಲಿ ವಾರಕರಿ ಚಳವಳಿಯ ಮೂಲಕ ಕನಕದಾಸ ಹಾಗೂ ಸಂತ ತುಕಾರಾಮರು ಸಮಾಜದ ಎಲ್ಲ ವರ್ಗಗಳನ್ನು ಒಳಗೊಂಡಿಸಿ, ತಮ್ಮ ಕೀರ್ತನೆಗಳು ಮತ್ತು ದೇವರನಾಮಗಳ ಮೂಲಕ ಜನಸಾಮಾನ್ಯರ ಹೃದಯವನ್ನು ಗೆದ್ದು, ಧಾರ್ಮಿಕ ಜಾಗೃತಿ ಮೂಡಿಸುತ್ತಿದ್ದರು. ಇನ್ನು ದಾಸ ಚಳವಳಿ ಹಾಗೂ ವಾರಕರಿ ಚಳವಳಿ ಮತಾಂತರವನ್ನು ಪ್ರೋತ್ಸಾಹಿಸಲಿಲ್ಲ. ಬದಲಾಗಿ, ಇದು ಹಿಂದೂ ಧರ್ಮದ ವಿವಿಧ ಸಂಪ್ರದಾಯಗಳನ್ನು ಒಂದುಗೂಡಿಸಿ, ಭಕ್ತಿಯ ಮೂಲಕ ಏಕತೆಯನ್ನು ಸಾಧಿಸುವತ್ತ ಗಮನ ಹರಿಸಿದವು ಎಂದರು.

ಇವರ ಚಳವಳಿಗಳು ಮತಾಂತರಕ್ಕಿಂತಲೂ ಹೆಚ್ಚಾಗಿ ಸಮಾಜ ಸುಧಾರಣೆ ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಪ್ರೋತ್ಸಾಹಿಸಿತು. ದಾಸರ ಕೀರ್ತನೆಗಳು ಇಂದಿಗೂ ಜನರನ್ನು ಪ್ರೇರಿಸುತ್ತಿವೆ ಮತ್ತು ಅವರ ಬೋಧನೆಗಳು ಶಾಶ್ವತವಾಗಿರುತ್ತವೆಂದು ತಿಳಿಸಿದರು.

ಕನಕದಾಸರು ಮತ್ತು ತುಕಾರಾಮರು ಇಬ್ಬರೂ ಭಾರತೀಯ ಭಕ್ತಿ ಪರಂಪರೆಯಲ್ಲಿ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. ಅವರ ಕೃತಿಗಳು ಇಂದಿಗೂ ಪ್ರಸ್ತುತವಾಗಿವೆ ಮತ್ತು ಜನರನ್ನು ಪ್ರೇರಿಸುತ್ತಿವೆ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಜಾನಪದ ಕಲಾವಿದ ಬೀಳಗಿಯ ಸಿದ್ಧಪ್ಪ ಬಿದರಿ ಅವರನ್ನು ಸನ್ಮಾನಿಸಲಾಯಿತು.

ಹಾಲುಮತ ಅಧ್ಯಯನ ಕೇಂದ್ರ ಸಂಚಾಲಕ ಡಾ. ಎಫ್.ಟಿ. ಹಳ್ಳಿಕೇರಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕನಕದಾಸ ಜಯಂತಿ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಕೀರ್ತನೆಗಳ ಗಾಯನ ಸ್ಪರ್ಧೆ ಹಾಗೂ ಚಿತ್ರಕಲೆಯ ಸ್ಪರ್ಧೆ ಆಯೋಜಿಸಲಾಗಿತ್ತು. ಇದರ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖಸ್ಥರು, ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಉಪನ್ಯಾಸಕಿ ಪದ್ಮಾವತಿ ಕೆ.ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಬಸವ ಶ್ರೀ ಇಡೀ ಮನುಕುಲ ಪ್ರೀತಿಸುವ ಗುಣದವರು
ಮಕ್ಕಳಲ್ಲಿ ಪರಿಸರ ಜ್ಞಾನ ಮೂಡಿಸುತ್ತಿರುವ ಪ್ರಶಂಸಾರ್ಹ: ಎಂ.ಎನ್.ಪಾಟೀಲ