ಕನ್ನಡಪ್ರಭ ವಾರ್ತೆ ಮೈಸೂರು
ಎಂಡಿಎ ಹಗರಣವನ್ನು ಸಿಬಿಐ ತನಿಖೆಗೆ ವಹಿಸದಿದ್ದರೇ ಮೈಸೂರು ಗ್ರಾಹಕರ ಪರಿಷತ್ ಹಾಗೂ ಕ್ಲೀನ್ ಮೈಸೂರು ಫೌಂಡೇಷನ್ ವತಿಯಿಂದ ಸಾರ್ವಜನಿಕ ಹಿತಾಸಕ್ತಿಯ ಮೊಕದ್ದಮೆ ದಾಖಲಿಸುವ ಚಿಂತನೆ ನಡೆಸಲಾಗುವುದು ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
50:50 ಅನುಪಾತದ ಹಂಚಿಕೆ ಹಗರಣ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾತ್ರ ಗುರಿಯಾಗಿಸಿಕೊಂಡು ಟೀಕಿಸುವುದು ಸರಿಯಲ್ಲ. ಎಂಡಿಎಯಲ್ಲಿ ಇತರೆ ಹಗರಣಗಳ ವಿಷಯದಲ್ಲೂ ರಾಜ್ಯದ ರಾಜಕೀಯ ನಾಯಕರು ಧ್ವನಿಯೆತ್ತದೇ ಕೇವಲ ಮುಖ್ಯಮಂತ್ರಿ ವಿರುದ್ಧ ಮಾತ್ರವೇ ಟೀಕಿಸುವುದು ಸರಿಯಲ್ಲ ಎಂದು ಅವರು ಖಂಡಿಸಿದರು.ಹಿಂದಿನ ಬಿಜೆಪಿ ಸರ್ಕಾರ ರಚಿಸಿದ ತಾಂತ್ರಿಕ ಸಮಿತಿ ವರದಿ ಸಹ ಇದೆ. ಆದರೂ ಅದನ್ನು ಈಗಿನ ಸರ್ಕಾರ ಸಂಪೂರ್ಣವಾಗಿ ಪ್ರಕಟಿಸಲು ಏಕೆ ಹಿಂಜರಿಯುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಅಲ್ಲದೆ, ಎಂಡಿಎ ಆಯುಕ್ತ ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸುವ ಬದಲು ಕೇವಲ ವರ್ಗಾವಣೆ ಮಾಡಿರುವುದು ಸಹ ಸರಿಯಲ್ಲ. ಹಿಂದಿನ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆಗೊಳಿಸಿರುವುದು ಸಹ ಅಚ್ಚರಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು.
ಮೈಗ್ರಾಪ ಪದಾಧಿಕಾರಿಗಳಾದ ವೆಂಕಟೇಶ್, ಭಾನುಪ್ರಶಾಂತ್, ಬಿ.ಎಸ್. ನಟರಾಜು, ಶೋಭನಾ ಇದ್ದರು.