940 ಚೀಲದಷ್ಟು ಭಾರತ್‌ ಅಕ್ಕಿ ಜಪ್ತಿ

KannadaprabhaNewsNetwork |  
Published : Mar 20, 2024, 01:48 AM ISTUpdated : Mar 20, 2024, 11:56 AM IST
ಅಕ್ಕಿ | Kannada Prabha

ಸಾರಾಂಶ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿ ಬಳಿ ಮಂಗಳವಾರ ಪಕ್ಷದ ಕಾರ್ಯಕರ್ತರಿಗೆ ‘ಭಾರತ ರೈಸ್‌’ ಅಕ್ಕಿ ಚೀಲ ವಿತರಿಸುವಾಗ ದಾಳಿ ಮಾಡಿರುವ ಚುನಾವಣಾ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು, ತಲಾ 10 ಕೆ.ಜಿ. ತೂಕದ 940 ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿ ಬಳಿ ಮಂಗಳವಾರ ಪಕ್ಷದ ಕಾರ್ಯಕರ್ತರಿಗೆ ‘ಭಾರತ ರೈಸ್‌’ ಅಕ್ಕಿ ಚೀಲ ವಿತರಿಸುವಾಗ ದಾಳಿ ಮಾಡಿರುವ ಚುನಾವಣಾ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು, ತಲಾ 10 ಕೆ.ಜಿ. ತೂಕದ 940 ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.

ಪಕ್ಷದ ಕಚೇರಿ ಬಳಿ ಭಾರತ್‌ ರೈಸ್‌ ಅಕ್ಕಿ ಚೀಲಗಳನ್ನು ಕಾರ್ಯಕರ್ತರಿಗೆ ವಿತರಿಸುತ್ತಿರುವ ಬಗ್ಗೆ ಮಾಹಿತಿ ಪಡೆದು, ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ದಾಳಿ ಮಾಡಿದರು. 

ಈ ವೇಳೆ ಅಕ್ಕಿಯನ್ನು ಜಪ್ತಿ ಮಾಡಲು ಮುಂದಾದಾಗ, ಮಾಜಿ ಕಾರ್ಪೊರೇಟರ್‌ ಉಮೇಶ್‌ ಶೆಟ್ಟಿ ಅವರು ವಿರೋಧಿಸಿದರು. ಅಕ್ಕಿ ವಿತರಿಸಲು ಅವಕಾಶವಿದ್ದು, ಜಪ್ತಿ ಮಾಡದಂತೆ ವಾಗ್ವಾದ ನಡೆಸಿದರು.

ಆದರೂ ಇದಕ್ಕೆ ಜಗ್ಗದ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು, ಲಾರಿ ಸಹಿತ ಅಕ್ಕಿ ಚೀಲಗಳನ್ನು ಜಪ್ತಿ ಮಾಡಿ ಗೋವಿಂದರಾಜನಗರ ಪೊಲೀಸ್‌ ಠಾಣೆಗೆ ಕೊಂಡೊಯ್ದರು. 

ಬಳಿಕ ಉಮೇಶ್‌ ಶೆಟ್ಟಿ, ಲಾರಿ ಚಾಲಕ ಹಾಗೂ ಗುತ್ತಿಗೆದಾರ ಸೇರಿದಂತೆ ಇತರರ ವಿರುದ್ಧ ಚುನಾವಣಾಧಿಕಾರಿಗಳು ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ಎನ್‌ಸಿಆರ್‌ ದಾಖಲಿಸಲಾಗಿದೆ. 

ನ್ಯಾಯಾಲಯದಿಂದ ಅನುಮತಿ ಪಡೆದ ಬಳಿಕ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವುದಾಗಿ ಗೋವಿಂದರಾಜನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌