ಭರತನಾಟ್ಯ ಪರೀಕ್ಷೆ: ನೃತ್ಯೋಪಾಸನಾ ಸಂಸ್ಥೆ ಶೇ.100 ಸಾಧನೆ

KannadaprabhaNewsNetwork |  
Published : Sep 03, 2025, 01:02 AM IST
ಫೋಟೋ: 2ಪಿಟಿಆರ್-ನೃತ್ಯೋಪಾಸನಾನೃತ್ಯೋಪಾಸನಾ ಕಲಾ ಅಕಾಡಮಿ  ವಿದ್ಯಾರ್ಥಿಗಳು ಶೇ. 100 ಫಲಿತಾಂಶ ಪಡೆದುಕೊಂಡಿದ್ದಾರೆ.   | Kannada Prabha

ಸಾರಾಂಶ

ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2024-25 ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್‌ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಶೇ.100 ಫಲಿತಾಂಶ ದಾಖಲಿಸಿದೆ.

ಕನ್ನಡಪ್ರಭ ವಾರ್ತೆ ಪುತ್ತೂರುಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2024-25 ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್‌ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಶೇ.100 ಫಲಿತಾಂಶ ದಾಖಲಿಸಿದೆ.

ಈ ಎರಡು ವಿಭಾಗಗಳ ಒಟ್ಟು 57 ಮಂದಿ ವಿದ್ಯಾರ್ಥಿಗಳು ಅಕಾಡೆಮಿ ಮುಖ್ಯಸ್ಥೆ, ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್‌ ಮಾರ್ಗದರ್ಶನದಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 52 ಡಿಸ್ಟಿಂಕ್ಷನ್‌ ಮತ್ತು 4 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಸೀನಿಯರ್‌ ವಿಭಾಗದ ಪರೀಕ್ಷೆಗೆ ಒಟ್ಟು ಎಂಟು ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ ಏಳು ಮಂದಿ ಡಿಸ್ಟಿಂಕ್ಷನ್ ಹಾಗೂ ಓರ್ವ ವಿದ್ಯಾರ್ಥಿನಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ.

ಧನ್ವಿ ಸುಧೀರ್ ಶೇ. 89 ಫಲಿತಾಂಶದೊಂದಿಗೆ ಅಕಾಡೆಮಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಆತ್ಮ- ಶೇ.80, ಭೃತಿ- ಶೇ.75.4, ನಮೃತಾ-ಶೇ. 71.4, ಅಪೇಕ್ಷಾ ಕೆ.ಪಿ. ಶೇ.83, ಸಂಜನಾ ಎಸ್.ಭಟ್ ಶೇ.87.8, ಧನ್ವಿ ಮಯ್ಯ-ಶೇ.86.2,

ರಕ್ಷಾ ಎಸ್.ಎಸ್. ಶೇ.87.8 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಜೂನಿಯರ್‌ನಲ್ಲೂ ಶೇ.100:

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ನೃತ್ಯೋಪಾಸನಾ ಕಲಾ ಅಕಾಡೆಮಿಯಿಂದ ಒಟ್ಟು 49 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಪೈಕಿ 45 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿನಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಈ ಪೈಕಿ ಸ್ಮೃತಿ ಟಿ. ಶೇ. 98.25 ಆಂಕಗಳೊಂದಿಗೆ ಕಲಾ ಅಕಾಡೆಮಿಯಲ್ಲಿ ಅತ್ಯಂತ ಹೆಚ್ಚು ಅಂಕ ಪಡೆದ ಗರಿಮೆ ಹೊಂದಿದ್ದಾರೆ. ಈ ಎರಡು ಪರೀಕ್ಷೆಗಳಿಗೆ ಕಲಾ ಅಕಾಡೆಮಿಯ ಪುತ್ತೂರು, ಸುಬ್ರಹ್ಮಣ್ಯ, ಉಪ್ಪಿನಂಗಡಿ ಹಾಗೂ ವಿಟ್ಲ ಶಾಖೆಗಳ ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ