ಕನ್ನಡಪ್ರಭ ವಾರ್ತೆ ಸೊರಬ
ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸಾಧನೆ ಎಲ್ಲಿದೆಯೋ ಅಲ್ಲಿ ನಮ್ಮ ನಡೆ ಎಂಬ ಕಾರ್ಯಕ್ರಮದ ಅಡಿಯಲ್ಲಿ ತಾಲೂಕಿನ ನಿಸರಾಣಿ ಹೋಬಳಿ ಕೆರೆಕೊಪ್ಪ ಗ್ರಾಮದ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಭರತನಾಟ್ಯ ಕಲಾವಿದೆ ಪೃಥ್ವಿ ಜಾಣ ಅವರನ್ನು ಸನ್ಮಾನಿಸಿ ಮಾತನಾಡಿದರು.
ಭರತ ಮುನಿಗಳ ತಂದ ಭರತನಾಟ್ಯವು ಮೇಲ್ನೋಟಕ್ಕೆ ಮೈ ಕುಣಿಸುವಂತೆ ಕಂಡರೂ ನಾಟ್ಯದಲ್ಲಿ ಭಾವ-ರಾಗ-ತಾಳಗಳ ಒಂದು ಪಾಕವಿದೆ. ಅದು ನಮ್ಮ ಮೈ-ಮನಗಳನ್ನು ಹದವಾಗಿಸಿ ನಮ್ಮನ್ನು ಧನ್ಯರನ್ನಾಗಿ ಮಾಡುತ್ತದೆ. ಅಂತರಂಗದ ಆನಂದವನ್ನು ನಾಟ್ಯದ ಮೂಲಕ ಹೊರತಂದು, ಅದನ್ನು ಆಸ್ವಾದಿಸುವವರನ್ನು ಪರವಶತೆಗೆ ಒಯ್ಯುವ ಜಾಣ್ಮೆ ನಮ್ಮ ಭರತನಾಟ್ಯ ಕಲೆಯಲ್ಲಿದೆ. ಅಲ್ಲಿ ದೇವಿಯ ಸೌಂದರ್ಯವೂ ಉಂಟು, ಶಿವನ ಗಾಂಭೀರ್ಯವೂ ಉಂಟು. ಶಿವೆಯ ಲಾಸ್ಯ-ಶಿವನ ತಾಂಡವಗಳೆರಡೂ ಸಮ್ಮಿಳಿತವಾಗಿದೆ ಎಂದ ಅವರು, ಆದರೆ ಇತ್ತೀಚಿನ ದಿನಗಳಲ್ಲಿ ಮನರಂಜನೆಯೊಡನೆ ಆತ್ಮರಂಜನೆಗೆ ಬೇಕಾದ ರಸ, ಭಾವಗಳನ್ನು ಸೇರಿಸಿದ್ದಾರೆ ಎಂದರು.ಪೃಥ್ವಿ ಜಾಣ ಇವರ ಸಾಧನೆಯನ್ನು ಎಲ್ಲರೂ ಮೆಚ್ಚುವಂತದ್ದು, ಇದು ಸೊರಬ ತಾಲೂಕಿಗೆ ಹೆಮ್ಮೆಯ ವಿಚಾರ. ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವುದು ಸಂಘ ಸಂಸ್ಥೆಗಳ ಆದ್ಯ ಕರ್ತವ್ಯ. ಇಂಥವರನ್ನು ಗುರುತಿಸಿ ಗೌರವಿಸಿದಾಗ ಅವರ ಪ್ರತಿಭೆಗೆ ತಕ್ಕ ಗೌರವ ನೀಡಿದಂತಾಗುತ್ತದೆ. ಇದರಿಂದ ಇತರರಿಗೆ ಪ್ರೇರಣೆ ದೊರೆಯುತ್ತದೆ. ಭರತನಾಟ್ಯ ಕಲೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಲುಪಿಸುವ ದಿಸೆಯಲ್ಲಿ ಪ್ರತಿಯೊಬ್ಬರು ಹೆಚ್ಚಿನ ಗಮನ ಹರಿಸಬೇಕಾಗುತ್ತದೆ ಎಂದರು.
ಫೋಟೊ:೨೯ಕೆಪಿಸೊರಬ-೦೧ : ಸೊರಬ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಭರನಾಟ್ಯ ಕಲಾವಿದೆ ಪೃಥ್ವಿ ಜಾಣ ಅವರನ್ನು ಕನ್ನಡ ಸಾಹಿತ್ಯ ಸಾಂಸ್ಕöÈತಿಕ ವೇದಿಕೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.