ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿಶ್ವ ಪರಿಸರ ದಿನಾಚರಣೆ ಅಭಿಯಾನ

KannadaprabhaNewsNetwork |  
Published : Jun 14, 2024, 01:06 AM IST
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಅಭಿಯಾನದ ಅಂಗವಾಗಿ ಚೆಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿಗಿಡಗಳನ್ನು ನೆಟ್ಟು ಅರ್ಥಪೂರ್ಣವಾಗಿ ಆಚರಿಸಲಾಯಿತು. | Kannada Prabha

ಸಾರಾಂಶ

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ವಿವಿಧ ಶಾಲೆಗಳಲ್ಲಿ ಭೂಮಿಯ ಮರುಸ್ಥಾಪನೆ ಮತ್ತು ಹಸಿರು, ಬರ ಪರಿಸ್ಥಿತಿ ನಿರ್ವಹಣೆ ಎಂಬ ಧ್ಯೇಯ ವಾಕ್ಯದಡಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚೆಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಗಿಡ ನೆಡುವುದರ ಮೂಲಕ ಆಚರಣೆಯಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಮಾನವನ ಮಿತಿಮೀರಿದ ಚಟುವಟಿಕೆಗಳಿಂದ ನಮ್ಮ ಸುತ್ತಲಿನ ಪರಿಸರ ಮಾಲಿನ್ಯವಾಗುತ್ತಿದೆ. ಗಿಡಗಳನ್ನು ನೆಟ್ಟು ಪೋಷಣೆ ಮಾಡುವುದರಿಂದ ಉತ್ತಮ ಪರಿಸರ ನಿರ್ಮಿಸಬಹುದು ಎಂದು ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ರಂಜಿತ್ ಹೇಳಿದ್ದಾರೆ.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ವಿವಿಧ ಶಾಲೆಗಳಲ್ಲಿ ಭೂಮಿಯ ಮರುಸ್ಥಾಪನೆ ಮತ್ತು ಹಸಿರು, ಬರ ಪರಿಸ್ಥಿತಿ ನಿರ್ವಹಣೆ ಎಂಬ ಧ್ಯೇಯ ವಾಕ್ಯದಡಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚೆಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ಸಂಪಾಜೆ ವಲಯ ಅಧ್ಯಕ್ಷ ಎಂ. ಧನಂಜಯ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಯಿಂದ ಪರಿಸರ ಸಂರಕ್ಷಣೆ ಅರಿವು ಮೂಡಿಸುವ ಉದ್ದೇಶದಿಂದ ಮಡಿಕೇರಿ ತಾಲೂಕಿನ ಆಯ್ದ 15 ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾಟಕೇರಿ, ಬೆಳಕುಮಾನಿ, ಜೋಡುಪಾಲ, ಚೆಂಬು ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ವಿವಿಧ ಶಾಲೆಗಳಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಸಂರಕ್ಷಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಗಿಡಗಳನ್ನು ನೀಡಿದ್ದು ಅದರ ಸಂಪೂರ್ಣ ಪೋಷಣೆಯ ಜವಾಬ್ದಾರಿಯನ್ನು ಮಕ್ಕಳು ಮಾಡಲಿದ್ದಾರೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಕೆ.ಬಿ ಉಷಾರಾಣಿ ಮಾತನಾಡಿ, ಪರಿಸರ ಸಂರಕ್ಷಣೆ ಮಾಡುವ ನಮ್ಮೆಲ್ಲರದು. ನಮ್ಮ ಭೂಮಿಯನ್ನು ಕಲುಷಿತಗೊಳಿಸಲು ಬಿಡಬಾರದು. ಗಿಡ ಮರಗಳನ್ನು ಕಡಿದು ಪರಿಸರವನ್ನು ಪ್ಲಾಸ್ಟಿಕ್ ಮಯವಾಗಿ ಮಾಡಿ ನೆಲ, ಜಲ, ವಾಯುಮಾಲಿನ್ಯ ಉಂಟು ಮಾಡುತ್ತಿದ್ದೇವೆ. ಇದನ್ನು ತಪ್ಪಿಸಲು ಎಲ್ಲರೂ ಪರಿಸರ ಸಂರಕ್ಷಣೆ ವಿಚಾರದಲ್ಲಿ ಜಾಗೃತರಾಗಬೇಕಾಗಿದೆ ಎಂದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನ ಚೆಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಪ್ತಿಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ