ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸಂಸ್ಥೆ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಮಾತನಾಡಿ, ಇದೊಂದು ವಿಶಿಷ್ಟ ಕಾರ್ಯಕ್ರಮ. ಜಿಲ್ಲೆಯ ಸೊಬಗನ್ನು ಮತ್ತಷ್ಟು ಪ್ರಜ್ವಲ ಗೊಳಿಸಲು ಭಾರತೀ ಉತ್ಸವ ಆಯೋಜಿಸಲಾಗುತ್ತಿದೆ. ಜನತೆ ಈ ಸೊಬಗನ್ನು ಸವಿಯಬೇಕು ಎಂದರು.
ವಿವಿಧ ಅಂಗ ಸಂಸ್ಥೆ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದಿಂದ ಮದ್ದೂರಿನ ಕ್ರೀಡಾಂಗಣದಿಂದ ಆರಂಭವಾದ ವಾಕ ಥಾನ್ ಟಿ.ಬಿ.ಸರ್ಕಲ್ ವೃತ್ತದ ಮಾರ್ಗವಾಗಿ ಮದ್ದೂರು- ಮಳವಳ್ಳಿ ಮುಖ್ಯ ರಸ್ತೆ, ಮರಕಾಡುದೊಡ್ಡಿ, ಉಪ್ಪಿನಕೆರೆಗೇಟ್, ಬೋರಾಪುರ, ಛತ್ರದ ಹೊಸಹಳ್ಳಿ, ಚಿಕ್ಕರಸಿನಕೆರೆ, ದೊಡ್ಡರಸಿನಕೆರೆ ಗೇಟ್, ದೇವರಹಳ್ಳಿ ಗೇಟ್ ಮಾರ್ಗವಾಗಿ ಭಾರತೀ ಕ್ಯಾಂಪಸ್ ವರೆಗೆ ನಡೆದ ಕಾಲ್ನನಡಿಗೆಯಲ್ಲಿ ಸುಮಾರು 3 ಸಾವಿರ ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಸಂಸ್ಥೆಯ ಎನ್ಸಿಸಿ, ಎನ್ಎಸ್ಎಸ್ ಸ್ವಯಂ ಸೇವಕರು, ಅಂಗ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಅಧ್ಯಾಪಕ ಕೇತರಾರು ನಡಿಗೆಯಲ್ಲಿ ಪಾಲ್ಗೊಂಡರು. ವಾಕಥಾನ್ ನಲ್ಲಿ ಭಾಗವಹಿಸಿದವರಿಗೆ ಟೀ ಶರ್ಟ್, ಮೊಬೈಲ್ ಆರೋಗ್ಯ ಸೇವೆ, ಬಾಳೆಹಣ್ಣು, ನೀರಿನ ವ್ಯವಸ್ಥೆ ಹಾಗೂ ಎಲ್ಲರಿಗೂ ಈ ಪ್ರಮಾಣ ಪತ್ರ ನೀಡಲಾಯಿತು.
ಈ ವೇಳೆ ಸಂಸ್ಥೆ ಸಿಇಒ ಆಶಯ್ ಜಿ.ಮಧು, ವಿವಿಧ ಅಂಗ ಸಂಸ್ಥೆ ಮುಖ್ಯಸ್ಥರಾದ ಡಾ.ಎಂ.ಎಸ್.ಮಹದೇವಸ್ವಾಮಿ, ಪ್ರೊ.ಎಸ್. ನಾಗರಾಜ್, ಡಾ.ತಮಿಜ್ ಮಣಿ, ಡಾ.ಬಿ.ಆರ್.ಚಂದನ್, ಡಾ.ಎಸ್.ಎಲ್.ಸುರೇಶ್, ಜಿ.ಕೃಷ್ಣ, ಪುಟ್ಟಸ್ವಾಮಿ, ಜಿ.ಬಿ.ಪಲ್ಲವಿ, ಸಿ.ವಿ.ಮಲ್ಲಿಕಾರ್ಜುನ, ಆಡಳಿತ ಅಧಿಕಾರಿಗಳಾದ ಜವರೇಗೌಡ, ಶೋಭಾ, ಸುನೀಲ್ ಕುಮಾರ್ ಸೇರಿದಂತೆ ಮತ್ತಿತರಿದ್ದರು.ಸೆ.18,19 ಹಾಗೂ 20 ರಂದು ಭಾರತೀ ಉತ್ಸವ: ಡಾ.ಎಂ.ಎಸ್.ಮಹದೇವಸ್ವಾಮಿ
ಭಾರತೀ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಸೆ.18,19 ಹಾಗೂ 20 ರಂದು 3 ದಿನಗಳ ಕಾಲ ಭಾರತೀ ಉತ್ಸವ ಜರುಗಲಿದೆ ಎಂದು ಕಾಲೇಜು ಪ್ರಾಂಶುಪಾಲ ಡಾ.ಎಂ.ಎಸ್.ಮಹದೇವಸ್ವಾಮಿ ತಿಳಿಸಿದರು.
ಸೆ.18ರಂದು ಬೆಳಗ್ಗೆ ಉತ್ಸವಕ್ಕೆ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಚಾಲನೆ ನೀಡುವರು. ಪರಿಶ್ರಮ ನೀಟ್ ಅಕಾಡೆಮಿ ಸಂಸ್ಥಾಪಕ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ವಿವರಿಸಿದರು.
ಸೆ.18 ರಂದು ಕಾಲೇಜಿನ ರಸ್ತೆಗಳಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಿದ್ದು, ಜೊತೆಗೆ ಪೂಜಾ ಕುಣಿತ, ವೀರಗಾಸೆ, ಬ್ಯಾಂಡ್ ಸೆಟ್ ಇತ್ಯಾದಿಗಳನ್ನೊಳಗೊಂಡ ಮೆರವಣಿಗೆ, 3 ದಿನಗಳು ಬೆಳಗ್ಗೆ ಯಿಂದ ಸಂಜೆವರೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಸುದ್ಧಿಗೋಷ್ಟಿಯಲ್ಲಿ ಪ್ರಧಾನ ಸಂಚಾಲಕರಾದ ಭಾರತೀ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪ್ರೊ.ಎಸ್. ನಾಗರಾಜು, ಭಾರತೀ ಹೆಲ್ತ್ ಸೈನ್ಸ್ಸ್ ನಿರ್ದೇಶಕ ಡಾ.ಟಿ. ತಮೀಜ್ಮಣಿ, ಸಂಚಾಲಕ ಪ್ರೊ.ಎಸ್. ರೇವಣ್ಣ, ಸಹ ಸಂಚಾಲಕರಾದ ಬಿ.ಕೆ. ಕೃಷ್ಣ, ಸುಂದ್ರೇಶ್ ಸೇರಿದಂತೆ ಮತ್ತಿತರಿದ್ದರು.