ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಭಾರತೀ ವಿದ್ಯಾಸಂಸ್ಥೆಯಿಂದ ಭಾರತೀ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಭಾರತೀ ಉತ್ಸವದ ಸಮಾರೋಪದಲ್ಲಿ ಮಾತನಾಡಿ, ಕಳೆದ ಒಂದೂವರೇ ದಶಕಗಳ ಹಿಂದೆ ಆರಂಭವಾದ ಭಾರತೀ ಉತ್ಸವ ವಿದ್ಯಾರ್ಥಿಗಳಿಗಷ್ಟೆ ಮನರಂಜನೆಯಾಗದೇ ಜನತೆಗೆ ಉತ್ತಮ ಮನರಂಜನೆ ನೀಡಿ ಜನಪ್ರಿಯಗೊಳ್ಳುತ್ತಿದೆ ಎಂದರು.
ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮವನ್ನು ವೀಕ್ಷಿಸಲು ಸಾವಿರಾರು ಮಂದಿ ಕಾಲೇಜಿಗೆ ಆಗಮಿಸಿ ಸಾಂಸ್ಕೃತಿಕ ರಸದೌತಣ ಸವಿಯುತ್ತಾರೆ ಎಂದರು.ಈ ವೇಳೆ ಸಂಸ್ಥೆ ಮುಖ್ಯಕಾರ್ಯನಿರ್ವಾಣಾಧಿಕಾರಿ ಆಶಯ್ ಮಧು, ಭಾರತೀ ಉತ್ಸವದ ಪ್ರಧಾನ ಸಂಚಾಲಕರಾದ ಡಾ.ಎಂ.ಎಸ್.ಮಹದೇವಸ್ವಾಮಿ, ಪ್ರೊ.ಎಸ್.ನಾಗರಾಜು, ಡಾ.ತಮೀಜ್ಮಣಿ, ಸಂಚಲಕ ಕೆ.ಸಿ.ಸುಂದ್ರೇಶ್, ಸಹ ಸಂಚಾಲಕ ಬಿ.ಕೆ. ಕೃಷ್ಣ, ಅರ್ಚನಾ ಸೇರಿದಂತೆ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳು ಮುಖ್ಯಸ್ಥರು ಉಪಸ್ಥಿತರಿದ್ದರು.
ಮೂರು ದಿನಗಳ ಭಾರತೀ ಉತ್ಸವ ಸಾಂಸ್ಕೃತಿಕ ಸಂಭ್ರಮದಲ್ಲಿ ಯುವ ಮನಸ್ಸುಗಳು ಹುಚ್ಚೆದ್ದು ಕುಣಿದರು. ನೂರಾರು ವಿದ್ಯಾರ್ಥಿ ಕಲಾವಿದರಿಗೆ ಭಾರತೀ ವಿದ್ಯಾ ಸಂಸ್ಥೆ ವೇದಿಕೆ ಕಲ್ಪಿಸಿ ಮನರಂಜನೆಯ ರಸದೌತಣ ನೀಡಿತು.
ಕರ್ನಾಟಕ ಜನಪದ ವೈವಿಧ್ಯತೆ ಮತ್ತು ಪರಂಪರೆ, ರಾಜ್ಯದ ಪ್ರತಿ ಜಿಲ್ಲೆಯ ಪ್ರಚಲಿತ ನೃತ್ಯ ಪ್ರಕಾರ, ಕನ್ನಡ ಸಿನಿಮಾಧಾರಿತ ಆಧುನಿಕ ನೃತ್ಯ ಪ್ರಕಾರಗಳು ಕರ್ನಾಟಕ ವೈಭವ ಸಾರುವಂತ ನೃತ್ಯ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಲಾಗಿತ್ತು.ಸೆ.19 ರಂದು ತಾಲೂಕು ಗೃಹ ನಿರ್ಮಾಣ ಸಹಕಾರ ಸಂಘದ ಸಭೆ: ಜಿ.ಈ.ರವಿಕುಮಾರ್
ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿ, ಸಹಕಾರ ನಿಯಮದ ಪ್ರಕಾರ ಎಲ್ಲಾ ಸಹಕಾರ ಸಂಘಗಳ ಸರ್ವ ಸದಸ್ಯರ ಮಹಾಸಭೆಯನ್ನು ಸೆಪ್ಟಂಬರ್ ತಿಂಗಳ ಒಳಗಾಗಿ ಮುಕ್ತಾಯ ಮಾಡಬೇಕಾಗಿದೆ. ಅದಕ್ಕಾಗಿ ನಮ್ಮ ಸಂಘದ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಕುಳಿತು ಚರ್ಚಿಸಿ ಸೆ.19ರಂದು ನಡೆಸಲು ತೀರ್ಮಾನಿಸಲಾಗಿದೆ. ಹೆಚ್ಚಿನ ಸದಸ್ಯರು ಸಭೆಗೆ ಹಾಜರಾಗಬೇಕು. ಜೊತೆಗೆ ಸಂಘದ ಅಭಿವೃದ್ಧಿಗೆ ಪೂರಕ ಸಲಹೆ ಸಹಕಾರ ನೀಡಬೇಕೆಂದು ಎಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಪುಟ್ಟಬಸವೇಗೌಡ, ಎಚ್.ಎನ್.ದಯಾನಂದ್, ಎಚ್.ಪಿ.ಶಿವಕುಮಾರ್, ಬಾಲರಾಜು, ಕಾರ್ಯದರ್ಶಿ ಎಚ್.ಎಸ್.ಪ್ರಕಾಶ್ ಹಾಜರಿದ್ದರು.