ಭಟ್ಕಳ ಹಳೇ ಬಸ್ ನಿಲ್ದಾಣದ ಮೀನು ಮಾರುಕಟ್ಟೆ ಸ್ಥಳಾಂತರ ಇಲ್ಲ: ಮಂಕಾಳ ವೈದ್ಯ

KannadaprabhaNewsNetwork |  
Published : Aug 31, 2025, 02:00 AM IST
ಪೊಟೋ ಪೈಲ್ : 30ಬಿಕೆಲ್2 | Kannada Prabha

ಸಾರಾಂಶ

ಭಟ್ಕಳ ಪಟ್ಟಣದ ಹಳೇ ಬಸ್ ನಿಲ್ದಾಣದ ಸನಿಹದ ಮೀನು ಮಾರುಕಟ್ಟೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು. ಮೀನು ಮಾರುಕಟ್ಟೆ ಸಮಸ್ಯೆ ಕುರಿತು ಮಾರಾಟಗಾರರ ಜತೆ ಚರ್ಚಿಸಿದರು.

ಭಟ್ಕಳ: ಪಟ್ಟಣದ ಹಳೇ ಬಸ್ ನಿಲ್ದಾಣದ ಸನಿಹದ ಮೀನು ಮಾರುಕಟ್ಟೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು.

ಸಚಿವರ ಬಳಿ ಮೀನು ಮಾರಾಟ ಮಹಿಳೆಯರು, ಅಂಗಡಿಕಾರರು ಅಳಲು ತೋಡಿಕೊಂಡು, ಪುರಸಭೆಯವರು ಸೆ. 1ರಿಂದ ಮೀನು ಮಾರುಕಟ್ಟೆಯನ್ನು ಸ್ಥಳಾಂತರ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಸ್ಥಳಾಂತರ ಮಾಡುವುದರಿಂದ ನಮಗೆ ವ್ಯಾಪಾರ ವಹಿವಾಟಿಗೆ ತೊಂದರೆ ಆಗಲಿದೆ. ನಾವು ಇಲ್ಲಿಂದ ಬೇರೆ ಕಡೆಗೆ ಹೋಗುವುದಿಲ್ಲ. ಇದೇ ಸ್ಥಳದಲ್ಲೇ ಮೀನು ಮಾರಾಟ ಮಾಡುತ್ತೇವೆ. ಬಹಳ ವರ್ಷಗಳಿಂದ ಇಲ್ಲಿ ಮೀನು ಮಾರುಕಟ್ಟೆ ಇದ್ದು, ಈ ಮೀನು ಮಾರುಕಟ್ಟೆಯನ್ನೇ ರಿಪೇರಿ ಮಾಡಿ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಇದಕ್ಕುತ್ತರಿಸಿದ ಸಚಿವರು ಸೆ. 1ರಿಂದ ಸಂತೆ ಮಾರುಕಟ್ಟೆ ಸನಿಹದ ಹೊಸ ಮೀನು ಮಾರುಕಟ್ಟೆ ಆರಂಭವಾಗಲಿದ್ದು, ಈ ಮೀನು ಮಾರುಕಟ್ಟೆಯನ್ನು ಅಲ್ಲಿಗೆ ಸ್ಥಳಾಂತರ ಮಾಡುವುದಿಲ್ಲ. ಆದರೆ ಹೊಸ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುವವರು ಮಾಡಬಹುದಾಗಿದೆ. ಮೀನು ತುಂಬಿದ ದೊಡ್ಡ ವಾಹನಗಳನ್ನು ಹೊಸ ಮಾರುಕಟ್ಟೆಯ ಬಳಿಯೇ ನಿಲ್ಲಿಸಲಾಗುತ್ತಿದ್ದು, ಅಲ್ಲಿಂದ ಮೀನು ತಂದು ನೀವು ಇಲ್ಲಿ ಮಾರಾಟ ಮಾಡಬಹುದು. ನೀವು ಈಗ ಮಾರಾಟ ಮಾಡುತ್ತಿರುವ ಮೀನು ಮಾರುಕಟ್ಟೆ ತೀರಾ ಹಳೆಯದಾಗಿದ್ದು, ಕಟ್ಟಡ ಶಿಥಿಲವಾಗಿದೆ. ಹೊಸ ಮೀನು ಮಾರುಕಟ್ಟೆ ಮಾಡುವ ಸಂದರ್ಭದಲ್ಲಿ ನಿಮ್ಮನ್ನು ಸ್ಥಳಾಂತರ ಮಾಡಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ನಿಮ್ಮ ಬಳಿ ಚರ್ಚಿಸಿಯೇ ಮಾಡಲಾಗುತ್ತದೆ. ಈಗಿನ ಮೀನು ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ. ನೀವು ಯಾವುದೇ ಕಾರಣಕ್ಕೂ ಆತಂಕ ಪಡುವುದು ಬೇಡ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ