ಭಟ್ಕಳ: ಇಲ್ಲಿನ ತಾಲೂಕು ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ 2025-26ನೇ ಸಾಲಿನ ಅಂದಾಜು ₹91.49 ಕೋಟಿ ವೆಚ್ಚದ ಮುಂಗಡ ಪತ್ರವನ್ನು ಆಡಳಿತಾಧಿಕಾರಿ ಜಿ. ಸತೀಶ ಮಂಡಿಸಿದರು.
ಲಿಂಕ್ ಡಾಕ್ಯುಮೆಂಟ್ ಅನುದಾನದ ಹೊರತಾಗಿ ಕಟ್ಟಡ ಬಾಡಿಗೆ ಮತ್ತು ಇತರ ಮೂಲದಿಂದ ₹20 ಲಕ್ಷ ಹಾಗೂ ಅನಿರ್ಬಂಧಿತ ಅನುದಾನದಡಿ ₹1.63 ಕೋಟಿ ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದರು.
ನಂತರ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮಂಗನಕಾಯಿಲೆ, ಚಿಕೂನ್ ಗೂನ್ಯ, ಡೆಂಘೀ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.ತಾಲೂಕಿನ ಪ್ರಾಥಮಿಕ ಶಾಲೆಗಳ ಜತೆ ಪದವಿಪೂರ್ವ ಕಾಲೇಜುಗಳಿಗೆ ವಿದ್ಯುತ್ ಸಂಪರ್ಕ ನೀಡಲು ಆದೇಶವಾಗಿದ್ದು, ವಸತಿ ನಿಲಯಗಳಿಗೂ ವಿದ್ಯುತ್ ಸಂಪರ್ಕ ನೀಡಲು ಆದೇಶವಾಗಿರುವ ಕುರಿತು ಅಧಿಕಾರಿಗಳು ಸಭೆಗೆ ತಿಳಿಸಿದರು.
ತಾಲೂಕಿನಲ್ಲಿ ಲೋಡ್ ಶೆಡ್ಡಿಂಗ್ ಪದ್ಧತಿ ಇಲ್ಲವಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಾತ್ರ ಆಗಾಗ ವಿದ್ಯುತ್ ವ್ಯತ್ಯಯವಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.ಸಭೆಯಲ್ಲಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶ ನಾಯಕ, ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ ಇತರರು ಉಪಸ್ಥಿತರಿದ್ದರು. ಕರಿಯಪ್ಪ ನಾಯ್ಕ ಸ್ವಾಗತಿಸಿದರು. ವ್ಯವಸ್ಥಾಪಕ ಕೃಷ್ಣಕಾಂತ ನಾಯ್ಕ ವಂದಿಸಿದರು.
ಭಟ್ಕಳ ತಾಪಂ ಮುಂಗಡ ಪತ್ರವನ್ನು ಆಡಳಿತಾಧಿಕಾರಿ ಸತೀಶ ಮಂಡಿಸಿದರು.