ಕಂಪ್ಲಿ ಪುರಸಭೆ ಅಧ್ಯಕ್ಷರಾಗಿ ಭಟ್ಟ ಪ್ರಸಾದ್ ಅಧಿಕಾರ ಸ್ವೀಕಾರ

KannadaprabhaNewsNetwork |  
Published : Jan 26, 2025, 01:33 AM IST
ಕಂಪ್ಲಿ ಪುರಸಭೆಯ ನೂತನ ಅಧ್ಯಕ್ಷರಾಗಿ ಭಟ್ಟ ಪ್ರಸಾದ್ ಅಧಿಕಾರ ಸ್ವೀಕರಿಸಿದರು.  | Kannada Prabha

ಸಾರಾಂಶ

ಪಟ್ಟಣದಲ್ಲಿ ಬಾಕಿ ಉಳಿದಿರುವ ರಸ್ತೆ ಅಗಲೀಕರಣದ ವಿಚಾರ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

ಕಂಪ್ಲಿ: ಪಟ್ಟಣದ ಜನತೆಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಪಕ್ಷ ಭೇದ ತೊರೆದು ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ ಎಂದು ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ತಿಳಿಸಿದರು.

ಪಟ್ಟಣದ ಪುರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ನೂತನ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.

ಫಾರಂ ನಂ.3 ವಿಚಾರ ಕುರಿತು ಸಾರ್ವಜನಿಕರು ನಿತ್ಯ ಪುರಸಭೆ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು, ಸರಳ ರೀತಿಯಲ್ಲಿ ಹಾಗೂ ನಿಗದಿತ ಸಮಯದಲ್ಲಿ ಫಾರಂ ನಂ.3ನ್ನು ಮನೆ ಬಾಗಿಲಿಗೆ ತಲುಪಿಸುವ ಕುರಿತು ಕ್ರಮ ಜರುಗಿಸಲಾಗುವುದು. ಪಟ್ಟಣದಲ್ಲಿ ಬಾಕಿ ಉಳಿದಿರುವ ರಸ್ತೆ ಅಗಲೀಕರಣದ ವಿಚಾರ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಟ್ರಾಫಿಕ್ ಉಂಟಾಗದಂತೆ ಸುಗಮ ಸಂಚಾರಕ್ಕೆ ಜನರಿಗೆ ಅನುಕೂಲತೆ ಕಲ್ಪಿಸಲಾಗುವುದು. ಪುರಸಭೆ ಜಾಗದಲ್ಲಿರುವಂತಹ ಬಿಎಸ್ವಿ ಶಾಲೆಯನ್ನು ಏಪ್ರಿಲ್ ಒಳಗಾಗಿ ಬೇರೆಡೆ ವರ್ಗಾಯಿಸಿಕೊಳ್ಳಲು ಆಡಳಿತ ಮಂಡಳಿಯವರಿಗೆ ತಿಳಿಸಿದ್ದು, ಶಾಲೆ ವರ್ಗಾವಣೆಗೊಂಡ ಕೂಡಲೇ ಅ ಜಾಗದಲ್ಲಿ ನೂತನ ಮಳಿಗೆಗಳನ್ನು ನಿರ್ಮಿಸಲಾಗುವುದು. ಈಗಿರುವ ಪುರಸಭೆ ಕಟ್ಟಡ ನವೀಕರಣದ ಕುರಿತಾಗಿಯೂ ಶಾಸಕರೊಂದಿಗೆ ಚರ್ಚಿಸಿ ನೂತನ ಕಟ್ಟಡ ನಿರ್ಮಾಣ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ಜೆ.ಎನ್. ಗಣೇಶ್, ಪುರಸಭೆ ಉಪಾಧ್ಯಕ್ಷೆ ಸುಶೀಲಮ್ಮ, ಸದಸ್ಯರಾದ ಕೆ.ಎಸ್. ಚಾಂದ್ ಬಾಷಾ, ಎಂ. ಉಸ್ಮಾನ್, ವೀರಾಂಜನೇಯಲು, ಪಿ.ಮೌಲಾ, ಲಡ್ಡು ಹೊನ್ನೂರ್ ವಲಿ, ಗುಡದಮ್ಮ, ನಾಗಮ್ಮ, ಜಿ.ಸುಮಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ