ಕನ್ನಡಪ್ರಭ ವಾರ್ತೆ ಚಡಚಣ
ಘಟನೆ ಹೇಗೆ ನಡೆಯಿತು?:
ಭೀಮನಗೌಡ ಬುಧವಾರ ಬೆಳಗ್ಗೆ ಗ್ರಾಪಂ ಕಚೇರಿ ಬಳಿಯಿರುವ ಸಲೂನ್ನಲ್ಲಿ ಕ್ಷೌರ ಮಾಡಿಸಿಕೊಳ್ಳುತ್ತಿದ್ದಾಗ ಏಕಾಏಕಿ ದಾಳಿ ನಡೆಸಿರುವ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ತಲೆಗೆ ರಾಡ್ನಿಂದ ಬಲವಾಗಿ ಹೊಡೆದಿದ್ದಾರೆ. ಆತ ಚೇರ್ ಮೇಲೆಯೇ ಕುಸಿದು ಬಿದ್ದಿದ್ದು, ನಾಡ ಪಿಸ್ತೂಲಿನಿಂದ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಮೂರು ಗುಂಡುಗಳು ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ತಗುಲಿ ಭೀಮನಗೌಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಕುಟುಂಬಸ್ಥರು ಹಾಗೂ ಆಪ್ತರು ಸೇರಿದಂತೆ ಸಹಸ್ರಾರು ಜನರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತದೇಹ ನೋಡಲು ಬಂದ ಜನಸ್ತೋಮವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
--ಭೀಕರ ಹತ್ಯೆಗೆ ಕಾರಣವೇನು?
ಕೊಲೆಗೆ ರಾಜಕೀಯ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಒಂದು ಬಾರಿ ತಾಲೂಕು ಪಂಚಾಯಿತಿ ಅಧ್ಯಕ್ಷನಾಗಿದ್ದ ಭೀಮನಗೌಡ, ಈಗ ಸತತ ಎರಡನೇ ಬಾರಿ ಗ್ರಾಪಂ ಅಧ್ಯಕ್ಷನಾಗಿದ್ದ. ಇದೇ ಡಿಸೆಂಬರ್ನಲ್ಲಿ ಅಧಿಕಾರಾವಧಿ ಮುಗಿಯಲಿದ್ದು, ಮತ್ತೆ ಚುನಾವಣೆ ನಡೆದರೇ, ಆತನೇ ಅಧ್ಯಕ್ಷನಾಗುತ್ತಾನೆ. ಇಲ್ಲದಿದ್ದರೆ ಆತ ತನ್ನ ಆಪ್ತನನ್ನು ಅಧ್ಯಕ್ಷ ಗಾದಿಗೆ ಕೂಡಿಸುತ್ತಾನೆ ಎಂದು ಭಾವಿಸಿ ಆರೋಪಿತರು ಆತನನ್ನು ಹತ್ಯೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.ಭೀಮನಗೌಡ 2017ರಲ್ಲಿ ಕೊಂಕಣಗಾಂವ ಗ್ರಾಮದಲ್ಲಿ ನಡೆದ ಧರ್ಮರಾಜ ಚಡಚಣ ಹಾಗೂ ಗಂಗಾಧರ ಚಡಚಣ ಹತ್ಯೆ ಪ್ರಕರಣದಲ್ಲಿ ಎ8 ಆರೋಪಿಯಾಗಿದ್ದ. ಈತ ಸುಮಾರು ಒಂದು ವರ್ಷ ಜೈಲಿನಲ್ಲಿದ್ದು, ನಂತರ ಜಾಮೀನಿನ ಮೇಲೆ ಹೊರಬಂದಿದ್ದ. ಅಲ್ಲದೇ, ಗ್ರಾಮ ಪಂಚಾಯಿತಿಯಲ್ಲಿ ಮನೆ, ಅನುದಾನ ಹಂಚಿಕೆ ಹಾಗೂ ಅಟ್ರಾಸಿಟಿ ಕೇಸ್ನಲ್ಲಿ ಓರ್ವ ಸದಸ್ಯನನ್ನು ಜೈಲಿಗೆ ಕಳುಹಿಸಿದ ಎನ್ನಲಾಗಿದೆ. ಭೀಮನಗೌಡನ ಮೇಲೆ ಹಲವು ಆಪಾದನೆಗಳು ಇದ್ದು, ರೌಡಿಶೀಟರ್ ಆಗಿದ್ದ.