ಕನ್ನಡಪ್ರಭ ವಾರ್ತೆ ಹುಕ್ಕೇರಿ
ಪ್ರತಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಮತಚಲಾಯಿಸುವಂತೆ ಕಾರ್ಯಕರ್ತರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಮೇಶ ಭೀಮಗೋಳ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗೆ ಎಲ್ಲ ರೀತಿಯಲ್ಲಿ ಶ್ರಮ ವಹಿಸಲಾಗಿದೆ. ಚುನಾವಣೆ ಘೋಷಣೆಯಾದ ದಿನದಿಂದಲೇ ಕ್ಷೇತ್ರದಲ್ಲಿ ಕಾಂಗ್ರೆಸ್ ಟೀಮ್ ವರ್ಕ್ ನಡೆಸಿದೆ. ಕ್ಷೇತ್ರದ ಮತದಾರರು ಪ್ರಿಯಾಂಕಾ ಪರ ಒಲವು ತೋರುತ್ತಿದ್ದು ಕಾಂಗ್ರೆಸ್ ಗೆಲುವು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮುಖಂಡರಾದ ಉದಯ ಹಾಲದೇವರಮಠ, ಸಚಿನ ದಡ್ಡಿ, ಅಶೋಕ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.