ಬಸವನಹಳ್ಳಿಯಲ್ಲಿ ಸಮುದಾಯ ಭವನಕ್ಕೆ ಸದಾನಂದ ಗೌಡ ಭೂಮಿ ಪೂಜೆ

KannadaprabhaNewsNetwork |  
Published : May 22, 2025, 11:57 PM IST
ಸಮುದಾಯ ಭವನದ ಭೂಮಿ ಪೂಜೆ | Kannada Prabha

ಸಾರಾಂಶ

ಬಸವನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಭೂಮಿ ಪೂಜೆಯನ್ನು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರಗೌಡ ಸಮಾಜ ವತಿಯಿಂದ ಸಮೀಪದ ಬಸವನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಭೂಮಿ ಪೂಜೆಯನ್ನು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ ಆಗುವುದರೊಂದಿಗೆ ಅಗತ್ಯ ಸೌಲಭ್ಯಗಳನ್ನು ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ಕುಶಾಲನಗರ ಗೌಡ ಸಮಾಜ ಕಳೆದ ಹಲವು ವರ್ಷಗಳಿಂದ ತಮ್ಮ ಸಮುದಾಯದ ಒಗ್ಗಟ್ಟಿನ ಪ್ರತೀಕ ದೊಂದಿಗೆ ಹಲವು ಅಭಿವೃದ್ಧಿ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು.ಕುಶಾಲನಗರ ಗೌಡ ಸಮಾಜ ಅತ್ಯಂತ ಸಂಘಟಿತ ವಿಶ್ವಾಸಾರ್ಹ ಸಂಘಟನೆಯಾಗಿದೆ. ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಹೆಸರು ಗಳಿಸಿದೆ ಎಂದರು. ಸಮಾಜದ ನೂತನ ಯೋಜನೆಗಳು ಸಾರ್ವಜನಿಕವಾಗಿ ಬಳಕೆ ಆಗುವ ಸಂದರ್ಭ ಸಮಾಜಕ್ಕೆ ಇನ್ನೂ ಹೆಚ್ಚಿನ ಗೌರವ ಲಭಿಸುತ್ತದೆ ಎಂದರು. ಸಮಾಜದ ಸದಸ್ಯರೇ ದೇಣಿಗೆಗಳನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಸಂತಸದ ವಿಷಯ ಎಂದರು. ಈ ಸಂದರ್ಭ ಮಾತನಾಡಿದ ಮಡಿಕೇರಿ ಕ್ಷೇತ್ರ ಶಾಸಕ ಮಂತರ್ ಗೌಡ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾಜ ಉತ್ತಮ ಕೆಲಸ ಮಾಡುತ್ತಿದೆ ಸರ್ಕಾರದಿಂದ ಹಾಗೂ ತಾನು ವೈಯಕ್ತಿಕವಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ ಬಿ ಭಾರತೀಶ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶುಭ ಕೋರಿದರು. ಅರ್ಚಕರಾದ ರಾಘವೇಂದ್ರ ಭಟ್ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್ ಅಂದಾಜು 9 ಕೋಟಿ ರು.ಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣವಾಗಲಿದೆ. ಪ್ರಥಮ ಹಂತದಲ್ಲಿ 3.5 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಳ್ಳಲಿದ್ದು ಎರಡನೇ ಹಂತದಲ್ಲಿ ಉಳಿದ ಕಾಮಗಾರಿ ನಡೆಸಲಾಗುವುದು ಎಂದು ಮಾಹಿತಿ ಒದಗಿಸಿದರು. ಈ ಸಂದರ್ಭ ಸಮಾಜದ ಉಪಾಧ್ಯಕ್ಷರಾದ ಕಾಶಿ ಪೂವಯ್ಯ, ಕುಲ್ಲಚನ ಹೇಮಂತ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಕರಂದ್ಲಾಜೆ ಆನಂದ್, ಪದ್ಮಾವತಿ ಮಹಿಳಾ ಒಕ್ಕೂಟದ ಅಧ್ಯಕ್ಷ ಚೀಯಂಡಿ ಶಾಂತಿ, ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷ ಚೆರಿಯಮನೆ ರಿಷಿ ಹರೀಶ್, ಗೌಡ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷರಾದ ದೇವಜನ ಚಿನ್ನಪ್ಪ, ಗೌಡ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ್, ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಅಂಬೆಕಲ್ ನವೀನ್, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಪುರಸಭೆ ಅಧ್ಯಕ್ಷರಾದ ಜಯಲಕ್ಷ್ಮಿ ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ಸಮಾಜದ ಪ್ರಮುಖರು ಸದಸ್ಯರು ಇದ್ದರು.

ಕುಶಾಲನಗರ ಗೌಡ ಸಮಾಜಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಅವರು ಶಾಸಕರಲ್ಲಿ ಮನವಿ ಮಾಡಿದರು.

PREV

Recommended Stories

ಗೋಕರ್ಣ ಗುಹೆಯಲ್ಲಿ ಸಿಕ್ಕ ಕುಟುಂಬ ಗಡೀಪಾರಿಗೆ ಹೈಕೋರ್ಟ್‌ನಿಂದ ತಡೆ
ಯಮೆನ್‌ ನರ್ಸ್‌ ಗಲ್ಲು ತಪ್ಪಿಸಿದ್ದು ಕನ್ನಡಿಗ ಷರೀಫ್‌’