ಮಹಾಲಕ್ಷ್ಮೀ ಅಮ್ಮನವರ ದೇವಾಲಯ ನಿರ್ಮಾಣಕ್ಕೆ ಸುರಪುರ ರಾಜವಂಶಸ್ಥ ರಾಜಾ ಕೃಷ್ಣಪ್ಪನಾಯಕ ಭೂಮಿಪೂಜೆ

KannadaprabhaNewsNetwork |  
Published : Aug 10, 2025, 01:31 AM IST
8ಕೆಎಂಎನ್ ಡಿ18 | Kannada Prabha

ಸಾರಾಂಶ

ಸುರಪುರ ಮಹಾ ಸಂಸ್ಥಾನ ಹಾಗೂ ಮೈಸೂರು ಮಹಾ ಸಂಸ್ಥಾನಕ್ಕೆ ಸಾವಿರಾರು ವರ್ಷಗಳಿಂದಲೂ ಅವಿನಾಭಾವ ಸಂಬಂಧವಿದೆ. ಸುಕ್ಷೇತ್ರದಲ್ಲಿ ತಾಯಿ ಮಹಾಲಕ್ಷ್ಮೀ ಅಮ್ಮನವರ ನೂತನ ದೇವಾಲಯದ ನಿರ್ಮಾಣಕ್ಕೆ ಸಂತೋಷದಿಂದ ಭೂಮಿ ಪೂಜೆ ಮಾಡಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿದ್ದೇನೆ.

ಕೆ.ಆರ್.ಪೇಟೆ : ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವರಾಹನಾಥ ಸುಕ್ಷೇತ್ರದಲ್ಲಿ ತಾಯಿ ಶ್ರೀಮಹಾಲಕ್ಷ್ಮೀ ಅಮ್ಮನವರ ದೇವಾಲಯ ನಿರ್ಮಾಣಕ್ಕೆ ಸುರಪುರ ಮಹಾ ಸಂಸ್ಥಾನದ ರಾಜ ವಂಶಸ್ಥ ರಾಜಾ ಕೃಷ್ಣಪ್ಪ ನಾಯಕ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸುರಪುರ ಮಹಾ ಸಂಸ್ಥಾನ ಹಾಗೂ ಮೈಸೂರು ಮಹಾ ಸಂಸ್ಥಾನಕ್ಕೆ ಸಾವಿರಾರು ವರ್ಷಗಳಿಂದಲೂ ಅವಿನಾಭಾವ ಸಂಬಂಧವಿದೆ. ಸುಕ್ಷೇತ್ರದಲ್ಲಿ ತಾಯಿ ಮಹಾಲಕ್ಷ್ಮೀ ಅಮ್ಮನವರ ನೂತನ ದೇವಾಲಯದ ನಿರ್ಮಾಣಕ್ಕೆ ಸಂತೋಷದಿಂದ ಭೂಮಿ ಪೂಜೆ ಮಾಡಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿದ್ದೇನೆ ಎಂದರು. ಭೂವರಾಹನಾಥ ಕಲ್ಲಹಳ್ಳಿ ಕ್ಷೇತ್ರವು ತಿರುಮಲ ತಿರುಪತಿ ಮಾದರಿಯಲ್ಲಿ ಸಮಗ್ರವಾಗಿ ಅಭಿವೃದ್ಧಿಯಾಗುತ್ತಿದೆ. ಈಗ ಮಹಾಲಕ್ಷ್ಮೀ ಅಮ್ಮನವರ ಭವ್ಯವಾದ ದೇವಾಲಯದ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿಸಿದ್ದಾರೆ. ದೇಗುಲ ಆದಷ್ಟು ಬೇಗ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಮೈಸೂರು ಅರಸರ ರಾಜ ಗುರುಗಳಾದ ಶ್ರೀ ಪರಕಾಲ ಸ್ವಾಮಿಗಳು ತಾಯಿ ಮಹಾಲಕ್ಷ್ಮೀ ಅಮ್ಮನವರ ದೇವಾಲಯದ ಭೂಮಿ ಪೂಜಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಭೂ ವರಾಹನಾಥ ದೇವಾಲಯ ವ್ಯವಸ್ಥಾಪನಾ ಸಮಿತಿ ಮ್ಯಾನೇಜಿಂಗ್ ಟ್ರಸ್ಟಿ ಡಾ.ಶ್ರೀನಿವಾಸ ರಾಘವನ್ , ಹೇಮಗಿರಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ಅಧಿಕಾರಿ ಬಿ.ನಾಗೇಶ್ ಸೇರಿದಂತೆ ಸುರಪುರ ಮಹಾಸಂಸ್ಥಾನದ ರಾಜ ಮನೆತನದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ