₹1 ಕೋಟಿ ವೆಚ್ಚದ ವೆಚ್ಚ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ

KannadaprabhaNewsNetwork | Published : May 11, 2025 1:22 AM
Follow Us

ಸಾರಾಂಶ

ಚೆಕ್ ಡ್ಯಾಂ ಹಾಗೂ ಜನರು ಸುಗಮವಾಗಿ ಸಂಚರಿಸಲು ಬ್ರಿಡ್ಜ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಜನರೂ ಸಹ ಕಾಮಗಾರಿ ನಡೆಯುವಾಗ ಪರಿಶೀಲನೆ ನಡೆಸುತ್ತಿರಬೇಕು. ಕಾಮಗಾರಿಯಲ್ಲಿ ಏನಾದರೂ ಕಳಪೆ ಕಂಡು ಬಂದರೇ ಕೂಡಲೇ ಕೆಲಸ ನಿಲ್ಲಿಸಿ ಶಾಸಕರಿಗೆ ಮಾಹಿತಿ ನೀಡಬೇಕು. ಕಾಮಗಾರಿ ಗುಣಮಟ್ಟ ಕಾಪಾಡುವಲ್ಲಿ ಜನರೂ ಸಹ ಕಾಳಜಿ ವಹಿಸಬೇಕು

ಕನ್ನಡಪ್ರಭ ವಾರ್ತೆ ಗುಡಿಬಂಡೆ

ತಾಲೂಕಿನ ಹಂಪಸಂದ್ರ ಗ್ರಾಪಂ ವ್ಯಾಪ್ತಿಯ ಆದಿನಾರಾಯಣಹಳ್ಳಿ ಗ್ರಾಮದ ಬಳಿ ಕುಶಾವತಿ ನದಿಗೆ ಅಡ್ಡಲಾಗಿ ಸುಮಾರು ಒಂದು ಕೋಟಿ ವೆಚ್ಚದ ಬ್ರಿಡ್ಜ್ ಹಾಗೂ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.

ಈ ಸಮಯದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಗ್ರಾಮದ ಜನರು ಬಹಳ ವರ್ಷಗಳಿಂದ ಗ್ರಾಮದ ಬಳಿ ಹರಿಯುವಂತಹ ಕುಶಾವತಿ ನದಿಗೆ ಅಡ್ಡಲಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಿಕೊಡುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಆಶಯದಂತೆ ಡ್ಯಾಂ ನಿರ್ಮಾಣಕ್ಕೆ ಚಾಲನೆ ನೀಡಿರುವುದಾಗಿ ಹೇಳಿದರು.

ಡ್ಯಾಂಗೆ ಸೇತುವೆ ನಿರ್ಮಾಣ

ಚೆಕ್ ಡ್ಯಾಂ ಹಾಗೂ ಜನರು ಸುಗಮವಾಗಿ ಸಂಚರಿಸಲು ಬ್ರಿಡ್ಜ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ಜನರೂ ಸಹ ಕಾಮಗಾರಿ ನಡೆಯುವಾಗ ಪರಿಶೀಲನೆ ನಡೆಸುತ್ತಿರಬೇಕು. ಕಾಮಗಾರಿಯಲ್ಲಿ ಏನಾದರೂ ಕಳಪೆ ಕಂಡು ಬಂದರೇ ಕೂಡಲೇ ಕೆಲಸ ನಿಲ್ಲಿಸಿ, ತಮಗೆ ಮಾಹಿತಿ ನೀಡಬೇಕು. ಕಾಮಗಾರಿ ಗುಣಮಟ್ಟ ಕಾಪಾಡುವಲ್ಲಿ ಜನರೂ ಸಹ ಕಾಳಜಿ ವಹಿಸಬೇಕು ಎಂದರು.

ಇದೇ ಸಮಯದಲ್ಲಿ ಭಾರತ-ಪಾಕಿಸ್ತಾನ ನಡುವಣ ಯುದ್ದದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಾಕಿಸ್ತಾನ ಪದೇ ಪದೇ ಭಾರತದ ಮೇಲೆ ಭಯೋತ್ಪಾಕರ ಮೂಲಕ ದಾಳಿ ಮಾಡುತ್ತಿದೆ. ಅದಕ್ಕೆ ತಕ್ಕಂತೆ ನಮ್ಮ ಸೈನಿಕರೂ ಸಹ ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸುತ್ತಿದ್ದಾರೆ. ಇಲ್ಲಿ ನಾವು ಸಂತೋಷದಿಂದ ಇರಲು ಗಡಿಯಲ್ಲಿ ಸೈನಿಕರು ತಮ್ಮ ಪ್ರಾಣ ಒತ್ತೆಯಿಟ್ಟು ಹೋರಾಡುತ್ತಿರುವುದೇ ಕಾರಣ ಎಂದರು.

ಈ ಸಮಯದಲ್ಲಿ ಸಣ್ಣ ನೀರಾವರಿ ಇಲಾಖೆಯ ಸುನೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿರೆಡ್ಡಿ, ಹಂಪಸಂದ್ರ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಸದಸ್ಯರಾದ ಪ್ರಕಾಶ್, ನರಸಿಂಹಮೂರ್ತಿ, ಯೂತ್ ಕಾಂಗ್ರೇಸ್ ನ ನವೀನ್, ಮುಖಂಡರಾದ ಗುರುಮೂರ್ತಿ, ಬಾಲಕೃಷ್ಣಾರೆಡ್ಡಿ ಸೇರಿದಂತೆ ಹಲವರು ಇದ್ದರು.