ಕನ್ನಡಪ್ರಭ ವಾರ್ತೆ ಮಡಿಕೇರಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಧ್ಯಕ್ಷರಾಗಿದ್ದ ಕೇಶವಪ್ರಸಾದ್ ಮುಳಿಯ ದೇವಾಲಯದ ಮೂಲಕ ಧಾರ್ಮಿಕ ಶಿಕ್ಷಣದಂಥ ವಿನೂತನ ಕಾರ್ಯಕ್ರಮ ಆಯೋಜಿಸಿದ್ದನ್ನು ಸ್ಮರಿಸಿದ ಅವರು, ಇಂಥ ಧರ್ಮಶಿಕ್ಷಣವನ್ನು ಮಕ್ಕಳಿಗೆ ಕಲಿಸುವಲ್ಲಿ ತಾಯದಿಂದರ ಪಾತ್ರವೂ ಮಹತ್ವದ್ದಾಗಿದೆ ಎಂದರು.
ಮೈಸೂರಿನ ಉದ್ಯಮಿ ಚೆರಿಯಮನೆ ನರೇಶ್ ಮಾತನಾಡಿ, ಪ್ರತಿಯೊಂದನ್ನೂ ಸಂಭ್ರಮದಿಂದ ಆಚರಿಸುವ ಮಹತ್ವದ ಗುಣ ಭಾರತೀಯರಲ್ಲಿದೆ. ಹೀಗಾಗಿಯೇ ಸಂಕ್ರಾಂತಿ ಸೇರಿದಂತೆ ಭಾರತದ ಹಬ್ಬಗಳೆಲ್ಲವೂ ಮನೆ ಮಂದಿಯ ಸಂಭ್ರಮವನ್ನು ಒಳಗೊಂಡಿರುತ್ತದೆ. ಸ್ಥಳೀಯರನ್ನು ಒಗ್ಗೂಡಿಸುವ ಗುಣ ಹಬ್ಬಗಳಿಗಿದೆ ಎಂದರು.ಶ್ರೀ ಚಾಮುಂಡೇಶ್ವರಿ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಬಿ.ಜೆ. ಯಶೋಧರ ಮಾತನಾಡಿ, ಪ್ರಕೃತ್ತಿ ಸೌಂದರ್ಯದ ನಡುವಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 80 ಲಕ್ಷ ರು. ವೆಚ್ಚದಲ್ಲಿ ಕಲಾ ಮಂದಿರ ನಿರ್ಮಾಣವನ್ನು ಒಂದು ವಷ೯ದೊಳಗೆ ಮುಕ್ತಾಯಗೊಳಿಸಲಾಗುತ್ತದೆ. ಈ ಮೂಲಕ ಭಜನೆ, ಯೋಗ, ಪ್ರಾಣಾಯಾಮ, ಬಾಲ ಸಂಸ್ಕಾರ, ಧಾರ್ಮಿಕ ಪ್ರವಚನಗಳಿಗೆ ಈ ಕೇಂದ್ರದಲ್ಲಿ ಅವಕಾಶ ನೀಡಲಾಗುತ್ತದೆ ಎಂದರು.ಶ್ರೀಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೖದ್ದಿ ಯೋಜನೆಯ ಮಡಿಕೇರಿ ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಿಮಲ, ದೇವಾಲಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಆರ್. ರಾಜು ವೇದಿಕೆಯಲ್ಲಿದ್ದರು. ವಿಠಲ ನಿರೂಪಿಸಿದರು. ಮಕರ ಸಂಕ್ರಾಂತಿ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಜರುಗಿತು.