ಕನ್ನಡಪ್ರಭ ವಾರ್ತೆ ಉಡುಪಿ
ಈ ಸಂದರ್ಭದಲ್ಲಿ ಸಂದೇಶ ನೀಡಿದ ಶ್ರೀಗಳು, ಇಲ್ಲಿ ಮಂದಿರಕ್ಕಾಗಿ ಸುಮಾರು 6 ಎಕ್ರೆ ಜಮೀನನನ್ನು ಖರೀದಿಸಲಾಗಿದ್ದು, ಮುಂದಿನ 2 ವರ್ಷಗಳಲ್ಲಿ ತಾವು ಉಡುಪಿ ಕೃಷ್ಣಮಠದಲ್ಲಿ ಶ್ರೀ ಕೃಷ್ಣನ ಪರ್ಯಾಯವನ್ನು ಮುಗಿಸಿ ಮರಳಿ ಬರುವಷ್ಟರಲ್ಲಿ, ಇಲ್ಲಿ ಶ್ರೀಕೃಷ್ಣ ಪ್ರತಿಷ್ಠೆಯ ಮೂಲಕ ಮಂದಿರದ ವಿದ್ಯುಕ್ತ ಉದ್ಘಾಟನೆಗೆ ಸಂಕಲ್ಪ ಮಾಡಲಾಗಿದೆ ಎಂದವರು ಹೇಳಿದರು.
ಈ ಸಂಕಲ್ಪಿತ ಶ್ರೀ ಕೃಷ್ಣ ಮಂದಿರದ ಗರ್ಭಗುಡಿಯ ಕೆಳಗೆಡೆ ಗೀತೆಯ 700 ಶ್ಲೋಕಗಳನ್ನು ಕೆತ್ತಿದ ಇಟ್ಟಿಗೆಗಳನ್ನು ಭಕ್ತರ ಹೆಸರಿನಲ್ಲಿ ಇರಿಸಲಾಗುವುದು.ತನ್ಮೂಲಕ ಶ್ರೀಗಳ ಕೋಟಿಗೀತಾ ಲೇಖನ ಯೋಜನೆಯ ಸ್ಮಾರಕವಾಗಿ ಅಮೆರಿಕಾದಲ್ಲಿ ಈ ಮಂದಿರ ಮೂಡಿಬರಲಿದೆ ಎಂದರು.
ಭೂಮಿ ಪೂಜೆಯ ವೈದಿಕ ಕಾರ್ಯಕ್ರಮಗಳನ್ನು ಉಡುಪಿಯ ಹೆರ್ಗ ವೇದವ್ಯಾಸ ಭಟ್ ನೆರವೇರಿಸಿದರು. ಮಠದ ಪ್ರಧಾನ ಅರ್ಚಕ ಜಯ ಪ್ರಸಾದ್ ಅಮ್ಮಣ್ಣಾಯ ಮುಂದಾಳುತ್ವದಲ್ಲಿ ನಡೆಯುತ್ತಿರುವ ಈ ಯೋಜನೆಯ ವಿವರವನ್ನು ಪ್ರಧಾನ ಕಾರ್ಯದರ್ಶಿ ಪ್ರಸನ್ನಾಚಾರ್ಯ ನೀಡಿದರು.ವಿದ್ವಾನ್ ಕೇಶವ ರಾವ್ ತಡಿಪಾತ್ರಿ, ಬಾಲಕೃಷ್ಣ ಭಟ್, ಹರೀಶ್ ಭಟ್, ಅಜಯ್, ಮುರಳಿ, ಶ್ರೀಕಾಂತ್ ಮೊದಲಾಗಿ ನೂರಾರು ಭಕ್ತಜನರು ಈ ಐತಿಹಾಸಿಕ ಭೂಮಿಪೂಜಾ ಕಾರ್ಯಕ್ರಮದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡರು.
ಅಮೆರಿಕಾದಲ್ಲಿ ಪುತ್ತಿಗೆ ಶ್ರೀಗಳು ಸ್ಥಾಪಿಸಿರುವ 11 ಶಾಖಾ ಮಠಗಳಲ್ಲಿ ಇದು 6ನೇ ಮಠವಾಗಿದ್ದು, ಇದೀಗ ಸಣ್ಣ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದೆ.