ಕುಷ್ಟಗಿ: ಸಾಹಿತಿ ಎಸ್.ಎಲ್. ಭೈರಪ್ಪ ಅವರು ಕಾದಂಬರಿಗಳನ್ನು ರಚಿಸುವ ಮೂಲಕ ಕನ್ನಡ ಓದುಗರ ಸಂಖ್ಯೆಯನ್ನು ಹೆಚ್ಚಿಸಿದವರು ಎಂದು ಕಸಾಪ ಅಧ್ಯಕ್ಷ ನಿಂಗಪ್ಪ ಸಜ್ಜನ ಹೇಳಿದರು.
ಎಪಿಎಂಸಿ ಮಾಜಿ ನಿರ್ದೇಶಕ ಹನುಮಂತರಾವ್ ದೇಸಾಯಿ ಮಾತನಾಡಿ, ಸಾಹಿತಿಗಳಿಗೆ ಓದುಗರೇ ಪ್ರಶಸ್ತಿ ಮತ್ತು ಪುರಸ್ಕಾರಗಳು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಚಿಂತನೆಗಳನ್ನು ಎಸ್.ಎಲ್. ಭೈರಪ್ಪ ಅವರು ತಮ್ಮ ಸಾಹಿತ್ಯದ ಮೂಲಕ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚುರಗೊಳಿದರು. ಬದುಕು ಮತ್ತು ಅನುಭವಗಳಿಗೆ ಸೃಜನಾತ್ಮಕವಾಗಿ ಅಭಿವ್ಯಕ್ತಪಡಿಸಲು ಕಾದಂಬರಿ ಪ್ರಕಾರವನ್ನು ಮಾಧ್ಯಮವಾಗಿಸಿಕೊಂಡರು. ಯಾವ ಸಾಹಿತ್ಯ ಪಂಥಗಳ ಗುಂಪಿಗೂ ಒಳಗಾಗದೆ ತಮ್ಮದೇ ವ್ಯಕ್ತಿತ್ವದ ಛಾಪು ಮೂಡಿಸಿದರು ಎಂದರು.
ಈ ವೇಳೆ ಒಂದು ನಿಮಿಷ ಮೌನಾಚರಣೆ ಮೂಲಕ ನುಡಿನಮನ ಸಲ್ಲಿಸಲಾಯಿತು. ಬಸನಗೌಡ ಪೊಲೀಸ್ಪಾಟೀಲ್, ದೊಡ್ಡನಗೌಡ ಮಾಟೂರು, ನಾರಾಯಣಪ್ಪ ಮೆದಿಕೇರಿ, ಪ್ರಭುದೇವ ಕಲ್ಯಾಣಮಠ, ಕೆ.ವೈ. ಕಂದಕೂರು, ಶ್ರೀನಿವಾಸ ಕಂಟ್ಲಿ, ಅಯ್ಯಪ್ಪ ಗೋತಗಿ, ಕಲ್ಲಯ್ಯಸ್ಯಾಮಿ ಸರಗಣಾಚಾರಿ ಇದ್ದರು.