ವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ ತಂಡದ ಬಿಚ್ಚಗಲ್ಲು ಪಂಚಾಕ್ಷರಪ್ಪ ತಂಡದ ಇಬ್ಬರು ಮಹಿಳೆಯರು, ಆರು ಪುರುಷರು ಸೇರಿ ಎಂಟು ಜನರು ಮಾತ್ರ ಗೆಲುವು ಸಾಧಿಸಿದ್ದಾರೆ.
ಬಳ್ಳಾರಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಚುನಾವಣೆ ಮತ ಎಣಿಕೆ ಪೂರ್ಣಗೊಂಡಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಇಲ್ಲಿನ ಎಸ್ಜಿ ಕಾಲೇಜಿನ ಉಪನ್ಯಾಸಕ ಬಿಚ್ಚಗಲ್ಲು ಪಂಚಾಕ್ಷರಪ್ಪ 223 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಹಾಲಿ ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್ ಪರಾಭವಗೊಂಡಿದ್ದಾರೆ.ತೀವ್ರ ಕುತೂಹಲ ಮೂಡಿಸಿದ್ದ ಚುನಾವಣೆ ಭಾನುವಾರ ನಡೆಯಿತು. ಭಾನುವಾರ ತಡರಾತ್ರಿವರೆಗೂ ಮತ ಎಣಿಕೆ ನಡೆದು ಸೋಮವಾರ ಬೆಳಗ್ಗೆ ಪೂರ್ಣಗೊಂಡಿತು.
ಹಾನಗಲ್ಲು ಕುಮಾರೇಶ್ವರ ವಚನ ವೃಂದದ ಚಾನಾಳ್ ಶೇಖರ್ ತಂಡದಿಂದ ಕಾರ್ಯಕಾರಿ ಸಮಿತಿಗೆ ಸ್ಪರ್ಧಿಸಿದ್ದ 10 ಮಹಿಳೆಯರು ಹಾಗೂ 20 ಮಂದಿ ಪೈಕಿ 8 ಮಹಿಳೆಯರು ಹಾಗೂ 14 ಪುರುಷರು ಸೇರಿದಂತೆ 22 ಜನರು ಗೆಲುವು ಸಾಧಿಸಿದ್ದಾರೆ. ಚಾನಾಳ್ ಶೇಖರ್ ಅವರಿಗೆ ಸಿರುಗುಪ್ಪ ತಾಲೂಕಿನಲ್ಲಿ ಮಾತ್ರ ಹೆಚ್ಚಿನ ಮತಗಳು ಬಂದಿದ್ದು, ಉಳಿದ ತಾಲೂಕುಗಳಲ್ಲಿ ಹಿನ್ನಡೆಯಾಯಿತು.
ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ ತಂಡದ ಬಿಚ್ಚಗಲ್ಲು ಪಂಚಾಕ್ಷರಪ್ಪ ತಂಡದ ಇಬ್ಬರು ಮಹಿಳೆಯರು, ಆರು ಪುರುಷರು ಸೇರಿ ಎಂಟು ಜನರು ಮಾತ್ರ ಗೆಲುವು ಸಾಧಿಸಿದ್ದಾರೆ.
ಉಪ ಚುನಾವಣೆ ಅಧಿಕಾರಿ ಲಿಂಗನಗೌಡ ಬಸವಭವನದಲ್ಲಿ ಸೋಮವಾರ ಮಧ್ಯಾಹ್ನ ಫಲಿತಾಂಶ ಘೋಷಿಸಿದರು. ಚುನಾವಣೆ ನಡೆಸುವುದ ಬೇಡ. ಅವಿರೋಧ ಆಯ್ಕೆ ಮಾಡಿಕೊಳ್ಳಿ ಎಂದು ಸಮಾಜದ ಹಿರಿಯರ ಮಾತಿಗೆ ಕಿವಿಗೊಡದ ಎರಡು ತಂಡಗಳು ಚುನಾವಣೆ ಅಖಾಡಕ್ಕೆ ಧುಮುಕಿದ್ದವು. ಹೀಗಾಗಿ ಚುನಾವಣೆಯಲ್ಲಿ ಎರಡು ತಂಡಗಳ ನಡುವೆ ತೀವ್ರ ಜಿದ್ದಾಜಿದ್ದಿ ಇತ್ತು.
ಚಾನಾಳ್ ಶೇಖರ್ ತಂಡದಿಂದ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದರೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಚಾನಾಳ್ ಶೇಖರ್ ಅವರನ್ನು ಸೋಲಿಸಿದ್ದೇಕೆ ಎಂಬ ವಿಶ್ಲೇಷಣೆಗಳು ನಡೆದಿವೆ. ವೀರಶೈವ ಲಿಂಗಾಯತರೇತರರಿಗೆ ಸದಸ್ಯತ್ವ ನೀಡಿಕೆ ಹಾಗೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿರುವುದು ಶೇಖರ್ ಸೋಲಿಗೆ ಕಾರಣ ಎಂದೇ ವಿಶ್ಲೇಷಿಸಲಾಗುತ್ತಿದೆ.
ಇದು ವೀರಶೈವ ಸಮುದಾಯದ ಗೆಲುವು. ಸಂಘಟಿತ ಪ್ರಯತ್ನದಿಂದ ಈ ಗೆಲುವು ಸಾಧ್ಯವಾಗಿದೆ. ಗೆದ್ದವರೆಲ್ಲ ನಮ್ಮವರೇ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಪ್ರಗತಿಗೆ ಶ್ರಮಿಸುತ್ತೇನೆ ಎನ್ನುತ್ತಾರೆ ವೀರಶೈವ ಮಹಾಸಭಾದ ನೂತನ ಜಿಲ್ಲಾಧ್ಯಕ್ಷ ಬಿಚ್ಚಗಲ್ಲು ಪಂಚಾಕ್ಷರಪ್ಪ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.