ರಾಮನಗರ: ಜನರಿಗೆ ಕೂಪನ್ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಮನೆ ಹಾಳು ಕಾಂಗ್ರೆಸ್ ಸರ್ಕಾರ ಇನ್ನು ಎರಡು ವರ್ಷಗಳಷ್ಟೇ ಇರಲಿದೆ. ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿ ನಮ್ಮ ತೆರಿಗೆ - ನಮ್ಮ ಹಕ್ಕು ಎಂದು ಹೋರಾಟ ಮಾಡುತ್ತಾರೆ. ಇಲ್ಲಿ ನಮ್ಮ ಭೂಮಿ - ನಮ್ಮ ಹಕ್ಕು ಎಂದ ಹೋರಾಟ ಮಾಡುತ್ತಿರುವ ರೈತರಿಗೆ ಅವರ ಭೂಮಿಯನ್ನು ಅವರಿಗೆ ಬಿಟ್ಟು ಕೊಡಿ.ರೈತರ ಎಷ್ಟೋ ಹೋರಾಟಗಳು ಯಶಸ್ಸು ಕಂಡಿವೆ. ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯದಿದ್ದರೆ ದೇವನಹಳ್ಳಿ ಮಾದರಿಯಲ್ಲಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
ಬುರುಡೆ ಬಿಡುತ್ತಿರುವ ಕೈ ನಾಯಕರು :ಗ್ರೇಟರ್ ಬೆಂಗಳೂರು ಹೆಸರಲ್ಲಿ ಹಳ್ಳ ತೋಡಿದರು. ರಾಮನ ಹೆಸರು ತೆಗೆದು ಬೆಂಗಳೂರು ಮಾಡಿದರು. ಇದರಿಂದ ಜನರ ಬದುಕೇನು ಬದಲಾವಣೆ ಆಗಿಲ್ಲ. 2006ರ ಬಿಡದಿ ಟೌನ್ ಶಿಪ್ ಯೋಜನೆಗೆ ಅಸ್ತಿತ್ವವೇ ಇಲ್ಲ. ಆ ಹೆಸರಿನಲ್ಲಿ ಭೂಮಿ ಕಬಳಿಸಲು ಮುಂದಾಗಿದ್ದಾರೆ. ಧರ್ಮಸ್ಥಳದಲ್ಲಿ ಬುರುಡೆ ಬಿಟ್ಟಂತೆ ಇಲ್ಲಿಯೂ ಬುರುಡೆ ಬಿಡುತ್ತಿದ್ದಾರೆ ಎಂದು ಕಿಡಿಕಾರಿದರು.
ಒಂದೆಡೆ ಸರ್ಕಾರ ವಿಧಾನಸೌಧದ ಮುಂದೆ ನಿಂತು ಹಸಿರು ಉಳಿಸಿ ಪರಿಸರ ಬೆಳೆಸಿ ಎಂದು ಘೋಷಣೆ ಮಾಡುತ್ತದೆ. ಮತ್ತೊಂದೆಡೆ ಟೌನ್ ಶಿಪ್ ಹೆಸರಿನಲ್ಲಿ ಮರ ಗಿಡಗಳನ್ನು ಕಡಿಯಲು ಮುಂದಾಗಿದೆ. ದೇವನಹಳ್ಳಿಯಲ್ಲೂ ಸಹ ನಿಮ್ಮಂತೆ ಹೋರಾಟ ನಡೆಸಿ ಯಶಸ್ಸು ಕಂಡಿದ್ದಾರೆ. ನೀವುಗಳು ನಿಮ್ಮ ಹೋರಾಟ ಮುಂದುವರೆಸಿ, ನಿಮ್ಮ ಬದುಕು, ಜೀವನ ಉಳಿಸಿಕೊಳ್ಳಲು ನಾವು ಬೆಂಬಲ ನೀಡುವ ಜೊತೆಗೆ ಸದನದಲ್ಲಿ ಪ್ರಸ್ತಾಪಿಸುತ್ತೇನೆ ಭರವಸೆ ನೀಡಿದರು.
ನೀರಾವರಿ ಜಮೀನು ವರ್ಗಾಯಿಸಲು ಆಗಲ್ಲ :
ಯುಪಿಎ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ 2013ರ ಭೂ ಸ್ವಾಧೀನ ಕಾಯಿದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು. ಅದನ್ನು ಬಿಟ್ಟು ರೈತರ ಜೊತೆ ಹುಡುಗಾಟ ಆಡುತ್ತಿದೆ.
ನಿಮ್ಮ ಕೈಕಾಲು ಹಿಡಿದು ಕಾರಣಕ್ಕೆ ನೀವುಗಳು ಹಾಕಿದ ವೋಟಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಜನರ ಕಷ್ಟಗಳನ್ನು ಕೇಳಬೇಕಾದ ಸರ್ಕಾರವೇ ರೈತರ ಭೂಮಿ ಕಬಳಿಸಿ ಜನ ವಿರೋಧಿಯಾಗಿ ನಡೆದು ಕೊಳ್ಳುತ್ತಿದೆ. ಜನರ ಸೇವೆ ಮಾಡಲು ಅಧಿಕಾರಕ್ಕೆ ಬಂದವರು ಶೇವಿಂಗ್ ಮಾಡುತ್ತಿದ್ದಾರೆ ಎಂದು ಅಶ್ವತ್ಥ ನಾರಾಯಣ ಸರ್ಕಾರದ ಕಾಲೆಳೆದರು.
ಬಿಜೆಪಿ ಮುಖಂಡ ಕೆ.ಆರ್.ಪ್ರಸಾದ್ ಗೌಡ, ಕೆಎಸ್ ಐಸಿ ಮಾಜಿ ಅಧ್ಯಕ್ಷ ಗೌತಮ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ರೈತ ಹೋರಾಟಗಾರರಾದ ರಾಮಣ್ಣ, ಪ್ರಕಾಶ್, ನಾಗರಾಜು, ಸೀನಣ್ಣ, ಕೃಷ್ಣಪ್ಪ, ಶೇಷಪ್ಪ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.
ರೈತರನ್ನು ಒಕ್ಕಲೆಬ್ಬಿಸುವುದು ಭೂ ತಾಯಿಗೆ ಮಾಡುವ ಅನ್ಯಾಯ. ಕುಮಾರಸ್ವಾಮಿ ಈ ಯೋಜನೆಗೆ ಚಾಲನೆ ಕೊಟ್ಟರು. ಆದರೆ, ಯೋಜನೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ಕೈ ಬಿಟ್ಟರು. ಹಾಗಾಗಿ ರಾಜ್ಯ ಸರ್ಕಾರವೂ ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈ ಬಿಡಬೇಕು. ಇಲ್ಲದಿದ್ದರೆ ವಿಧಾನಸಭೆ ಒಳಗೆ ಮತ್ತು ಹೊರಗೆ ಹೋರಾಟ ನಡೆಯಲಿದೆ. ಜನ ಶಕ್ತಿ ಮುಂದೆ ಯಾವ ಶಕ್ತಿ ಯೂ ಇಲ್ಲ.
- ಡಾ.ಸಿ.ಎನ್.ಮಂಜುನಾಥ್ , ಸಂಸದರು.ಕೋಟ್ .............
ಈ ಭಾಗದ ಭೂಮಿಯನ್ನು ಖರೀದಿ ಮಾಡಿರುವವರು ಅವರ ಹಿಂಬಾಲಕರಾಗಿದ್ದಾರೆ. ಇದರ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷದ ಹುನ್ನಾರವಿದೆ. ಭೂ ಸ್ವಾಧೀನದಿಂದ ಎರಡು ಗ್ರಾಮ ಪಂಚಾಯಿತಿಗಳ ಹೈನುಗಾರಿಕೆ, ಪರಿಸರ, ರೈತರ ಬದುಕಿಗೆ ಧಕ್ಕೆ ಆಗುತ್ತದೆ. ಆದ್ದರಿಂದ ವಿರೋಧ ಪಕ್ಷವು ಸರ್ಕಾರವನ್ನು ಎಚ್ಚರಿಸುವ ಮೂಲಕ ರೈತರಿಗೆ ನ್ಯಾಯ ಕೊಡಿಸಬೇಕಿದೆ.- ಪ್ರಸಾದ್ ಗೌಡ, ಬಿಜೆಪಿ ಮುಖಂಡರು.
16ಕೆಆರ್ ಎಂಎನ್ 3,4,5.ಜೆಪಿಜಿ3.ವಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ಎತ್ತಿನ ಗಾಡಿ ಮೂಲಕ ಮೆರವಣಿಗೆಯಲ್ಲಿ ಕರೆತರಲಾಯಿತು.
4.ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಚಳವಳಿಯಲ್ಲಿ ಭಾಗಿಯಾಗಿರುವುದು5.ರೈತರು ಹಸಿರು ಟವಲ್ ಬೀಸುತ್ತಿರುವುದು.