ಅಕ್ರಮ ಕಟ್ಟಿ ಹಾಕಿದ್ದ ಗೋವು ರಕ್ಷಣೆ ಮಾಡಿದ ಸಲಗರ ವಿರುದ್ಧ ಪ್ರಕರಣ

Published : Jun 08, 2025, 07:38 AM IST
Sharanu Salagara

ಸಾರಾಂಶ

ಶಾಸಕ ಶರಣು ಸಲಗರ, ಅವರ ವಾಹನ ಚಾಲಕ ಮಂಜು, ಬೆಂಬಲಿಗರಾದ ಕೃಷ್ಣಾ ಗೋಣೆ ಹಾಗೂ ಸಾಗರ್‌ ಲಾಡೆ ಸೇರಿ 7 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಸವಕಲ್ಯಾಣ(ಬೀದರ್‌): ಅಕ್ರಮ ಗೋಸಾಗಣೆ ಮಾಡಿ ಗೋಹತ್ಯೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಶುಕ್ರವಾರ ಮುಸ್ಲಿಮರಿಗೆ ಬೆದರಿಕೆ ಹಾಕಿದ ಆರೋಪದಡಿ ಶಾಸಕ ಶರಣು ಸಲಗರ, ಅವರ ವಾಹನ ಚಾಲಕ ಮಂಜು, ಬೆಂಬಲಿಗರಾದ ಕೃಷ್ಣಾ ಗೋಣೆ ಹಾಗೂ ಸಾಗರ್‌ ಲಾಡೆ ಸೇರಿ 7 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. 

ಶುಕ್ರವಾರ ಬೆಳಗ್ಗೆ ಶಾಸಕ ಶರಣು ಸಲಗರ ಅವರು ನಗರದ ಮೆಹಬೂಬ್‌ನಗರ ಬಡಾವಣೆಯಲ್ಲಿ 25ಕ್ಕೂ ಹೆಚ್ಚು ದನ ಕರುಗಳನ್ನು ಅಕ್ರಮವಾಗಿ ಕಟ್ಟಿ ಹಾಕಿರುವುದನ್ನು ಪತ್ತೆ ಹಚ್ಚಿದ್ದವು. ಅಲ್ಲದೆ ಅವುಗಳನ್ನು ಗೋಶಾಲೆಗೆ ರವಾನಿಸುವಂತೆ ಒತ್ತಾಯಿಸಿ ಯಶಸ್ವಿಯಾಗಿದ್ದರು. 

ಈ ವೇಳೆ ಅವರು ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಅವರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಮತ್ತು ಬೆಂಬಲಿಗರೊಂದಿಗೆ ಮುಸ್ಲಿಂ ಸಮುದಾಯದ ಅವರ ಮನೆಯಂಗಳಕ್ಕೆ ತೆರಳಿ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರ ಬೆಂಬಲಿಗರ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ.

PREV
Read more Articles on

Recommended Stories

ಅಂತಃಶಕ್ತಿ ಅರಿಯಲು ಧ್ಯಾನವೇ ಮೂಲ ಅಸ್ತ್ರ: ಸ್ವಾಮಿ ಜ್ಯೋತಿರ್ಮಯಾನಂದ
ಅಲೆಮಾರಿಗಳ ಗುಡಿಸಲುಗಳಿಗೆ ಸಂಸದ ಭೇಟಿ