ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.30ರ ಸಂಜೆ ಪಟ್ಟಣದ ಪ್ರವಾಸಿ ಮಂದಿರದಿಂದ ಪೇಟೆಬೀದಿ ಮೂಲಕ ಶೋಭಾಯಾತ್ರೆಯು ಉಗ್ರ ನರಸಿಂಹಸ್ವಾಮಿ ದೇವಾಲಯದವರೆಗೆ ನಡೆಯಲಿದೆ. ಬಳಿಕ ಹಳೆ ಬಸ್ ನಿಲ್ದಾಣದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ ಎಂದರು.
ತಾಲೂಕಿನ ಎಸ್.ಐ.ಹೊನ್ನಲಗೆರೆ ಶಿವಕ್ಷೇತ್ರ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಶ್ರೀಗಳು ಸಭಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಸಂಘಟನೆ ಮುಖಂಡ, ಸಾಮಾಜಿಕ ಕಾರ್ಯಕರ್ತ ಉಲ್ಲಾಸ್, ಹಿಂದೂ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ರಾಷ್ಟ್ರಾದ್ಯಂತ ಹಿಂದೂಗಳ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಹಿಂದೂಗಳಾದ ನಾವು ಸಂಘಟಿತರಾಗಿ ಹೋರಾಟ ರೂಪಿಸದಿದ್ದಲ್ಲಿ ಮುಂದೆ ನಮ್ಮ ಮೇಲೆ ದೊಡ್ಡ ಅನಾಹುತ ಸಂಭವಿಸಬಹುದು. ಹಿಂದೂ ಧರ್ಮ, ಸಂಸ್ಕೃತಿ, ನೆಲ, ಜಲ, ಅತಿಕ್ರಮ ಮಾಡುವವರ ವಿರುದ್ಧ ಯುವಶಕ್ತಿ ಹೆಚ್ಚಿನ ರೀತಿಯಲ್ಲಿ ಕೈಜೋಡಿಸಿ ಹಿಂದೂ ಸಮಾಜವನ್ನು ಉಳಿಸಲು ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಿದರು.
ಹಿಂದೂ ಸಮಾಜೋತ್ಸವ ಆಯೋಜನ ಸಮಿತಿ ಜಿಲ್ಲಾ ಕಾರ್ಯನಿರ್ವಾಹಕ ಅವಿನಾಶ್ ಮಾತನಾಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100ನೇ ವರ್ಷಾಚರಣೆ ಅಂಗವಾಗಿ ಮಂಡ್ಯ ಜಿಲ್ಲೆಯ 77 ಸ್ಥಳಗಳಲ್ಲಿ ಹಿಂದೂ ಸಮಾಜೋತ್ಸವ ಮತ್ತು ಶೋಭಾಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಹಿಂದೂ ಸಮಾಜೋತ್ಸವ ಹಿಂದೂ ಜ್ಞಾನ ಪರಂಪರೆ, ಹಿಂದೂಗಳ ಬಗ್ಗೆ ಕಾಳಜಿ, ಗೌರವ ಕಾಪಾಡುವ ನಿಟ್ಟಿನಲ್ಲಿ ನಡೆಯುತ್ತಿದೆ. ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಯುವಕರು, ಹಿರಿಯರು ಸೇರಿ ಎಲ್ಲಾ ವಯಸ್ಸಿನ ಜನರು, ಜಾತಿ, ಲಿಂಗದ ಭೇದವಿಲ್ಲದೆ ಭಾಗವಹಿಸಬೇಕು ಎಂದು ಕೋರಿದರು.
ಸುದ್ಧಿಗೋಷ್ಠಿಯಲ್ಲಿ ಸಮಾಜೋತ್ಸವದ ಮುಖಂಡರಾದ ಶಾಮಿಯಾನ ಗುರುಸ್ವಾಮಿ, ಎಂ.ಎಸ್.ವೀರಭದ್ರಸ್ವಾಮಿ, ನಗರಘಟಕದ ಅಧ್ಯಕ್ಷ ಮಧುಕುಮಾರ, ಎಂ.ಎಸ್. ಜಗನ್ನಾಥ, ಚಿಕ್ಕಅಂಕನಹಳ್ಳಿ ಮನುಕುಮಾರ್, ಅರವಿಂದ, ಗುರುಮಲ್ಲೇಶ್, ಸಂತೋಷ್ ಇದ್ದರು.