ಕನ್ನಡಪ್ರಭ ವಾರ್ತೆ ಮಂಡ್ಯ
ಮೊದಲಿಗೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರವಾಗಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕ ಪಿ.ರವಿಕುಮಾರ್, ಸ್ಥಳೀಯ ಮುಖಂಡರು, ಕಾರ್ಯಕರ್ತರು ಬೈಕ್ ರ್ಯಾಲಿಯೊಂದಿಗೆ ವಿವಿಧ ರಸ್ತೆಗಳಲ್ಲಿ ಪ್ರಚಾರ ನಡೆಸಿದರು.
ನಗರದ ಕಾರೇಮನೆ ಗೇಟ್ನಿಂದ ಆರಂಭವಾದ ಪ್ರಚಾರ ರ್ಯಾಲಿ ಹೊಳಲು ವೃತ್ತದ ಮಾರ್ಗವಾಗಿ ಜಯಚಾಮರಾಜೇಂದ್ರ ಒಡೆಯರ್ ರಸ್ತೆಗೆ ಆಗಮಿಸಿತು. ಅಲ್ಲಿಂದ ಕೆ.ಆರ್.ರಸ್ತೆ ಮೂಲಕ ಹೊಸಹಳ್ಳಿ ವೃತ್ತಕ್ಕೆ ಆಗಮಿಸಿ ರೋಡ್ ಶೋ ಅಂತ್ಯಗೊಂಡಿತು. ರ್ಯಾಲಿಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.ಜಿಲ್ಲೆಯ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವುದರೊಂದಿಗೆ ಅಭ್ಯರ್ಥಿ ವೆಂಕಟರಮಣೇಗೌಡ ಅವರನ್ನು ಗೆಲ್ಲಿಸುವಂತೆ ಸಚಿವರು, ಶಾಸಕರು ಮತದಾರರಲ್ಲಿ ಮನವಿ ಮಾಡಿದರು.
ಸಂಜೆ 3.30ರ ಸಮಯಕ್ಕೆ ಆರಂಭವಾದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ರೋಡ್ ಶೋಗೆ ಜನಸಸಾಗರವೇ ಹರಿದುಬಂದಿತ್ತು. ಕೊಪ್ಪದಲ್ಲಿ ರೋಡ್ ಶೋ ಮುಗಿಸಿ ಆಗಮಿಸಿದ್ದ ಕುಮಾರಸ್ವಾಮಿ ಅವರು ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಊಟ ಮಾಡಿ ಕೆಲಸಮಯದವರೆಗೆ ವಿಶ್ರಾಂತಿ ಪಡೆದಿದ್ದರು.