ರಾಮನಗರ: ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಭಾರತ ಸಂವಿಧಾನ ಗಟ್ಟಿಯಾಗಿದೆ. ಅದರ ನೆರಳಿನಲ್ಲಿ ಬದುಕು ಕಟ್ಟಿಕೊಂಡಿರುವ ಮತಾಂಧರರು ಸಂವಿಧಾನ ಬದಲಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಎನ್.ನರಸಿಂಹಯ್ಯ ಕಿಡಿಕಾರಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗ ಕೇಂದ್ರದಲ್ಲಿ ಮತಾಂಧರರ ಕೈಗೆ ಅಧಿಕಾರ ಸಿಕ್ಕಿದೆ. ಸಂವಿಧಾನಕ್ಕೆ ಗೌರವ ಕೊಟ್ಟು ಸಂರಕ್ಷಿಸಬೇಕಾದ ಆ ಜನಪ್ರತಿನಿಧಿಗಳೇ ಸಂವಿಧಾನ ಬದಲಿಸುವ ಮಾತನ್ನಾಡಿ ಅಗೌರವ ತೋರುವ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಾಣ್ಣುಡಿಯಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಅಪಾರ ಪಾಂಡಿತ್ಯ ಹೊಂದಿದ್ದ ಮಹಾನ್ ಮಾನವತವಾದಿಯಾಗಿದ್ದರು. ಸಂವಿಧಾನ ಬದಲಿಸಲು ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ನಾವು ಧ್ವನಿ ಎತ್ತಬೇಕಿದೆ ಎಂದರು.
ಅಂಬೇಡ್ಕರ್ ಅವರ ಕೊಡುಗೆಗಳು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವುದಷ್ಟೆ ಅಲ್ಲ, ಜನರು ಜಾತಿ ಧರ್ಮವನ್ನು ಮೀರಿ ಉತ್ತಮ ರೀತಿಯಲ್ಲಿ ಬದುಕುವ ಪಾಠವನ್ನು ಕಟ್ಟಿಕೊಡುತ್ತದೆ. ಜಯಂತಿಗಳು ಕೇವಲ ಸರಳವಾಗಿ ಆಚರಣೆ ಮಾಡುತ್ತಿದ್ದು, ಅರ್ಥಪೂರ್ಣ ವಾಗಿ ಆಚರಿಸುವ ಅಗತ್ಯವಿದೆ. ಅವು ಒಂದು ಜಾತಿಗೆ ಸೀಮಿತವಾಗದೆ, ಜಾತಿಯನ್ನು ಮೀರಿ ಜಯಂತಿಗಳು ನಡೆಯಬೇಕು ಎಂದು ಹೇಳಿದರು.ಗ್ಯಾರಂಟಿ ಯೋಜನಾ ಸಮಿತಿ ತಾಲೂಕು ಅಧ್ಯಕ್ಷ ವಿ.ಎಚ್.ರಾಜು ಮಾತನಾಡಿ, ಅಂಬೇಡ್ಕರ್ ಅವರು ಕಾನೂನು ಮಂತ್ರಿಯಾಗಿ, ಎಲ್ಲರಿಗೂ ಸಮಾನತೆಯ ಹಕ್ಕು ಕೊಟ್ಟವರು. ಅವರು ಕೊಟ್ಟ ಸಂವಿಧಾನದ ನಮ್ಮ ಬದುಕಿನ ದಾರಿದೀಪವಾಗಿದೆ ಎಂದು ಅವರ ಕೊಡುಗೆಗಳನ್ನು ಸ್ಮರಿಸಿದರು.
ಕೋಟ್ ...........
- ಎನ್.ನರಸಿಂಹಯ್ಯ, ಜಿಲ್ಲಾಧ್ಯಕ್ಷರು, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ, ಬೆಂ.ದಕ್ಷಿಣ
ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಆಚರಿಸಲಾಯಿತು.