ಬಿಹಾರ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಇಲ್ಲ

KannadaprabhaNewsNetwork |  
Published : Nov 16, 2025, 01:30 AM IST
15ಕೆಬಿಪಿಟಿ.4.ಸುದ್ದಿಗಾರರೊಂದಿಗೆ ಆಹಾರ ಸಿಚವ ಕೆ.ಹೆಚ್.ಮುನಿಯಪ್ಪ ಮಾತನಾಡಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಜಿಲ್ಲೆಯ ೬ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಿದ್ದು ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಆರ್ಹರಾಗಿದ್ದಾರೆ. ೀ ಬಗ್ಗೆ ಹೈಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಪ್ರಸ್ತವನೆ ಕೆ.ಪಿ.ಸಿ.ಸಿ. ಮುಂದೆ ಇಲ್ಲ.

ಕನ್ನಡಪ್ರಭ ವಾರ್ತೆ ಕೋಲಾರ

ಬಿಹಾರ ಚುನಾವಣೆಯು ರಾಜ್ಯದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ. ಈ ಫಲಿತಾಂಶವೂ ಯಾವ ದಿಕ್ಕೂಚಿಯೂ ಅಲ್ಲ. ೨ಂ೨೮ ರ ವಿಧಾನ ಸಭಾ ಹಾಗೂ ೨೦೨೯ರ ಲೋಕ ಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಆಹಾರ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಭವಿಷ್ಯ ನುಡಿದರು, ನಗರದ ಹಾರೋಹಳ್ಳಿಯಲ್ಲಿನ ತಮ್ಮ ಗೃಹ ಕಚೇರಿಯಲ್ಲಿನ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾದ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ, ಬಿಹಾರದ ಚುನಾವಣೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಪ್ರತಿ ಮತದಾರದ ಖಾತೆಗೆ ೧೦ ಸಾವಿರ ರೂಗಳಂತೆ ಕೋಟ್ಯಂತರ ಮಂದಿಗೆ ಜಮೆ ಮಾಡುವ ಮೂಲಕ ಎನ್.ಡಿ.ಎ. ಗೆಲವು ಸಾಧಿಸಿದೆ ಎಂದರು. ಕಾಂಗ್ರೆಸ್ ಒಗ್ಗಟ್ಟಾಗಿದೆ:

ಮಾಜಿ ಸಹಕಾರ ಸಚಿವ ರಾಜಣ್ಣನವರು ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದಿರುವುದು ಅವರ ವೈಯುಕ್ತಿ ಅಭಿಪ್ರಾಯವಾಗಿದೆ. ಇದಕ್ಕೆ ನಾನು ಯಾವೂದೇ ರೀತಿ ಪ್ರತಿಕ್ರಿಯಿಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟಾಗಿದ್ದೇವೆ. ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಹಾಗೂ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ಸಿದ್ದರಾಗಿದ್ದೇವೆ. ನಮ್ಮ ಪಕ್ಷವು ನುಡಿದಂತೆ ನಡೆಯುವ ಮೂಲಕ ಚುನಾವಣೆಗೆ ಮುನ್ನ ನೀಡಿದ್ದಪ್ರಶ್ನೆಯೊಂದಕ್ಕೆ ಮುಖ್ಯ ಮಂತ್ರಿಗಳ ಬದಲಾವಣೆ ಬಗ್ಗೆ ಹೈ ಕಮಾಂಡ್ ಅಂತಿಮ ನಿರ್ಧಾರವಾಗಲಿದೆ. ಈಗ ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಜಿಲ್ಲೆಯ ೬ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಿದ್ದು ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಆರ್ಹರಾಗಿದ್ದಾರೆ. ೀ ಬಗ್ಗೆ ಹೈಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಪ್ರಸ್ತವನೆ ಕೆ.ಪಿ.ಸಿ.ಸಿ. ಮುಂದೆ ಇಲ್ಲ ಎಂದು ಸ್ವಷ್ಟ ಪಡೆಸಿದರು,

ಸ್ಥಳೀಯರಿಗೆ ಜಿಲ್ಲಾ ಉಸ್ತುವಾರಿ ನೀಡಲಿ

ಸಚಿವ ಸಂಪುಟ ಪುನರ್ ರಚನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ಸ್ಥಳೀಯರಿಗೆ ನೀಡ ಬೇಕೆಂಬುವುದು ಎಲ್ಲಾರ ಒತ್ತಾಸೆಯಾಗಿದೆ. ಸಚಿವ ಸ್ಥಾನಕ್ಕೆ ನಾನು ಸಹ ಆಶಾ ಭಾವನೆ ಹೊಂದಿದ್ದೇನೆ. ಈ ಬಗ್ಗೆ ಎಲ್ಲವನ್ನು ಪಕ್ಷದ ಹೈ ಕಮಾಂಡ್ ತೀರ್ಮಾನಿಸಲಿದೆ. ಅವರ ತೀರ್ಮಾನಕ್ಕೆ ನಾವೆಲ್ಲಾ ಬದ್ದರಾಗಿದ್ದೇವೆ. ಜಿಲ್ಲೆಯಲ್ಲಿ ಯಾರಿಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಕಳೆದ ಎರಡೂವರೆ ವರ್ಷದಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಎಲ್ಲಾ ಕ್ಷೇತ್ರದಲ್ಲೂ ಅಗಿದೆ. ಅದರೂ ಇನ್ನು ಹಲವಾರು ಅಭಿವೃದ್ದಿ ಕಾರ್ಯಕ್ರಮಗಳಿಗೆ ಸ್ಥಳೀಯರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡುವುದು ಅವಶ್ಯವಿದೆ ಎಂದರು

ಕೆ.ಎಂ.ಎಫ್ ಗೆ ಜಿಲ್ಲಾ ಪ್ರತಿನಿಧಿಯಾಗಿ ಶಾಸಕ ಕೆ.ವೈ. ನಂಜೇಗೌಡರನ್ನು ಕಳುಹಿಸಲು ಜಿಲ್ಲಾ ಹಾಲು ಒಕ್ಕೂಟದ ಎಲ್ಲಾ ನಿರ್ದೇಶಕರು ಒಮ್ಮತದ ತೀರ್ಮಾನದಂತೆ ಶಿಫಾರಸ್ಸು ಮಾಡಲಾಗಿದೆ. ನಾನು ಸಹ ಆಕಾಂಕ್ಷಿಯಾಗಿದ್ದು ಎಲ್ಲಾ ನಾಯಕರಲ್ಲೂ ಮನವಿ ಮಾಡಿದ್ದೆ ಎಂದರು. ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ

ಜಿಲ್ಲೆಯಲ್ಲಿ ಯಾವ ಗುಂಪುಗಾರಿಕೆಯೂ ಕಾಂಗ್ರೇಸ್ ಪಕ್ಷದಲ್ಲಿ ಇಲ್ಲ ಅದು ಬಿಜೆಪಿಯಷ್ಟು ಯಾವ ಪಕ್ಷದಲ್ಲಿ ಇಲ್ಲ ಕಾಂಗ್ರೇಸ್ ಪಕ್ಷದಲ್ಲಿ ಏನೇ ಭಿನ್ನಭಿಪ್ರಾಯಗಳು ವೈಯುಕ್ತ ಅದರೆ ಪಕ್ಷದ ವಿಚಾರವಾಗಿ ನಾವೇಲ್ಲಾ ಸಂಘಟಿತರಾಗಿ ಕೈ ಜೋಡಿಸುತ್ತೇವೆ ಎಂಬುವುದಕ್ಕೆ ರಾಜ್ಯದಲ್ಲಿ ೧೩೬ ಸ್ಥಾನ ಪಡೆದಿದ್ದು ಜಿಲ್ಲೆಯಲ್ಲಿ ೪ ಸ್ಥಾನ ಪಡೆದಿರುವುದೆ ಸಾಕ್ಷಿಯಾಗಿದೆ. ಎಂದು ತಿಳಿಸಿದರು, ರಾಜ್ಯ ಕಾಂಗ್ರೇಸ್ ಪಕ್ಷ ವಕ್ತಾರ ದಳಸನೂರು ಗೋಪಾಲ್ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಮಾಜಿ ಅಧ್ಯಕ್ಷ ಕೆ.ಚಂದ್ರರೆಡ್ಡಿ, ನಗರ ಬ್ಲಾಕ್ ಕಾಂಗ್ರೇಸ್ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಜಯದೇವ್, ಹಿಂದುಳಿದ ಘಟಕದ ಅಧ್ಯಕ್ಷ ಮಧುಸೂಧನ್, ಜಿಲ್ಲಾ ಕಾರ್ಯದರ್ಶಿ ವೆಂಕಟಪತಪ್ಪ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರ ಜಾತ್ರೆಗೆ ರಾಜ್ಯದಿಂದ 25 ಸಾವಿರ ಭಕ್ತರು
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಲಿ: ಸಮ್ಮೇಳನಾಧ್ಯಕ್ಷ ಸುರೇಶ್ ಸಂಸ್ಕೃತಿ