ಗುಳೇದಗುಡ್ಡ: ಎತ್ತಿನ ಬಂಡಿಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ತಾಲೂಕಿನ ಕೋಟೆಕಲ್ ಹತ್ತಿರದ ಮುರಡಿ ಕ್ರಾಸ್ ಬಳಿ ಬುಧವಾರ ಸಂಜೆ ನಡೆದಿದೆ. ಸಿದ್ದಪ್ಪ ಹಣಮಂತ ಚಿಲಾಪೂರ (30) ಮೃತ ಯುವಕ. ಕೋಟೆಕಲ್ಲ ಕಡೆಯಿಂದ ಮುರಡಿ ಕ್ರಾಸ್ ಕಡೆಗೆ ವೇಗವಾಗಿ ಹೊರಟಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಮುರಡಿ ಕ್ರಾಸ್ ಬಳಿ ರಸ್ತೆ ಬದಿಗೆ ನಿಂತಿದ್ದ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.