ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಸವಾರ ಸಾವು

KannadaprabhaNewsNetwork |  
Published : Nov 04, 2023, 12:31 AM IST

ಸಾರಾಂಶ

ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಸವಾರ ಸಾವು

ಕಡೂರು: ತಾಲೂಕಿನ ಚೌಳ ಹಿರಿಯೂರಿನಿಂದ ಬಾಗಶೆಟ್ಟಿಹಳ್ಳಿಗೆ ತೆರಳುತ್ತಿದ್ದ ಬೈಕ್ ಸವಾರ ಎತ್ತಿನ ಗಾಡಿಗೆ ಗುದ್ದಿಕೊಂಡು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಗಟಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಗಶೆಟ್ಟಿಹಳ್ಳಿ ಗ್ರಾಮದ ಈಶ್ವರಪ್ಪ ಅವರ ಮಗ ರಮೇಶ್(40) ಮೃತ ದುರ್ಧೈವಿ. ಗುರುವಾರ ರಾತ್ರಿ ಚೌಳ ಹಿರಿಯೂರಿನಿಂದ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ರೇಣುಕಪ್ಪ ಅವರ ತೋಟದ ಸಮೀಪ ಈ ದುರ್ಘಟನೆ ಸಂಭವಿಸಿದೆ ಎಂದು ಈಶ್ವರಪ್ಪ ಠಾಣೆಗೆ ದೂರು ನೀಡಿದ್ದಾರೆ. ಯಗಟಿ ಪಿಎಸ್‍ಐ ರಂಗನಾಥ್ ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕನಾಯಕನಹಳ್ಳಿ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ
ಸಿಪಿಐಗೆ ಸೇರಿದ ಆಸ್ತಿ ಮಾರಾಟ, ಎಸ್ಪಿಗೆ ದೂರು: ಆವರಗೆರೆ ವಾಸು