ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಬೆಸಗರಹಳ್ಳಿ ಲೇ.ಆರ್.ಮುರುಗನ್ ಪುತ್ರ ಬಿ.ಎ ಮಧುಕುಮಾರ್ (32)ಮೃತಪಟ್ಟ ದುರ್ದೈವಿ.
ಮೃತ ಮಧುಕುಮಾರ್ ಪಟ್ಟಣದ ಮಳವಳ್ಳಿ ಮಾರ್ಗದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಮಧುಕುಮಾರ್ ನನ್ನು ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.ಈ ಸಂಬಂಧ ಸಹೋದರ ನೀಡಿದ ದೂರಿನ ಮೇರೆಗೆ ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾಸುದಾರರಿಗೆ ಒಪ್ಪಿಸಲಾಯಿತು. ಭಾನುವಾರ ಸ್ವಗ್ರಾಮ ಬೆಸಗರಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಮೃತನಿಗೆ ಪತ್ನಿ ದೀಪಾ ಹಾಗೂ 4 ವರ್ಷದ ಪ್ರಬುದ್ಧ ಎಂಬ ಪುತ್ರನಿದ್ದಾನೆ.
ಶಾಸಕ ಕೆ.ಎಂ.ಉದಯ್, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ರೈತ ಸಂಘಟನೆ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಹಾಗೂ ಇನ್ನಿತರ ಸಂಘ- ಸಂಸ್ಥೆಯ ಪದಾಧಿಕಾರಿಗಳು ಮೃತರ ಅಂತಿಮ ದರ್ಶನ ಪಡೆದರು.
ಮೃತ ಪತ್ರಕರ್ತ ಬಿ.ಎ.ಮಧುಕುಮಾರ್ ಅವರ ಕುಟುಂಬಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಆರ್ಥಿಕ ಸಹಾಯ ಮಾಡಿದರು.