ಅಂಗವಿಕಲರಿಂದ ಮತದಾನ ಜಾಗೃತಿಗಾಗಿ ಬೈಕ್‌ ರ್ಯಾಲಿ

KannadaprabhaNewsNetwork |  
Published : Apr 07, 2024, 01:46 AM IST
ಯಲಹಂಕ ಕ್ಷೇತ್ರದ ಹೆಸರಘಟ್ಟದಲ್ಲಿ ಆಯೋಜಿಸಲಾಗಿದ್ದ ಅಂಗವಿಕಲರ ಮತದಾನ ಜಾಗೃತಿ ಬೈಕ್ ರ್ಯಾಲಿಗೆ ಅಧಿಕಾರಿಗಳೂ ಚಾಲನೆ ನೀಡಿದರು. | Kannada Prabha

ಸಾರಾಂಶ

ಯಲಹಂಕ ಸಮೀಪದ ಹೆಸರಘಟ್ಟದಲ್ಲಿ ಅಂಗವಿಕಲರಿಂದ ಮತದಾನ ಜಾಗೃತಿ ಬೈಕ್ ರ್ಯಾಲಿ ನಡೆಯಿತು. ಬೆಂಗಳೂರು ನಗರ ಜಿಲ್ಲಾಡಳಿತ, ಬೆಂ.ಉತ್ತರ ಮತ್ತು ಯಲಹಂಕ ತಾಲೂಕು ಪಂ‌ಚಾಯಿತಿ ಹಾಗೂ ಅಂಗವಿಕಲರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಭಾಗಿತ್ವದಲ್ಲಿ ಶನಿವಾರ ಜಾಗೃತಿ ರ್ಯಾಲಿ ಆಯೋಜಿಸಲಾಗಿತ್ತು.

ಯಲಹಂಕ: ಇಲ್ಲಿಗೆ ಸಮೀಪದ ಹೆಸರಘಟ್ಟದಲ್ಲಿ ಅಂಗವಿಕಲರಿಂದ ಮತದಾನ ಜಾಗೃತಿ ಬೈಕ್ ರ್ಯಾಲಿ ನಡೆಯಿತು. ಬೆಂಗಳೂರು ನಗರ ಜಿಲ್ಲಾಡಳಿತ, ಬೆಂ.ಉತ್ತರ ಮತ್ತು ಯಲಹಂಕ ತಾಲೂಕು ಪಂ‌ಚಾಯಿತಿ ಹಾಗೂ ಅಂಗವಿಕಲರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಭಾಗಿತ್ವದಲ್ಲಿ ಶನಿವಾರ ಜಾಗೃತಿ ರ್ಯಾಲಿ ಆಯೋಜಿಸಲಾಗಿತ್ತು. ರ್ಯಾಲಿಗೆ ಬೆಂಗಳೂರು ಉತ್ತರ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ಓ.ರಮೇಶ್, ಯಲಹಂಕ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಅಪೂರ್ವ ಎ.ಕುಲಕರ್ಣಿ, ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಯಮುನಾಚಾಲನೆ ನೀಡಿದರು.

ಹೆಸರಘಟ್ಟದ ವ್ಯಾಸ ಮಹರ್ಷಿ ವೃತ್ತದಿಂದ ಆರಂಭಗೊಂಡ ‘ಮತದಾನ ಜಾಗೃತಿ ಬೈಕ್ ರ್ಯಾಲಿ’ ಹುರಳಿಚಿಕ್ಕನಹಳ್ಳಿ, ಹುಸ್ಕೂರು ಮತ್ತು ಗೋಪಾಲಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಮೂಲಕ ಸಾಗಿತು,

ರ್ಯಾಲಿ ಉದ್ದೇಶಿಸಿ ಬೆಂ.ಉತ್ತರ ತಾಪಂ ಇಒ ರಮೇಶ್ ಮಾತನಾಡಿ, ಏಪ್ರಿಲ್ 26ರಂದು ನಡೆಯಲಿರುವ‌ ಲೋಕಸಭಾ ಚುನಾವಣೆಯ ಮತದಾನದ ದಿನದಂದು ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವ ದಿಸೆಯಲ್ಲಿ ಶೇಕಡ 100ರಷ್ಟು ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಎಚ್.ಆರ್.ರಾಜೇಶ್, ಸಿದ್ದಪ್ಪ, ಡಿ.ಜಿ.ರೇವಿನಾ, ಜಿಲ್ಲಾ ಐಇಸಿ ಸಂಯೋಜಕ ನವೀನ್ ಬಾಬು, ವಾಯ್ಸ್ ಆಫ್ ನೀಡಿ ಸಂಘದ ಸಂಸ್ಥಾಪಕ ಅರುಣ್ ಕುಮಾರ್, ಈರಪ್ಪ ಕುಂಬಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ