ಬೈಕ್‌ ವ್ಹೀಲಿಂಗ್‌ ಹುಚ್ಚಾಟ : ಮೂವರು ಸವಾರರ ಸೆರೆ

KannadaprabhaNewsNetwork |  
Published : Mar 11, 2025, 02:02 AM IST
ವ್ಹೀಲಿಂಗ್‌ | Kannada Prabha

ಸಾರಾಂಶ

ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪಶ್ಚಿಮ ಉಪವಿಭಾಗದ ಸಂಚಾರ ಪೊಲೀಸರು ಮೂವರು ಸವಾರರನ್ನು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವ ಪುಂಡರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪಶ್ಚಿಮ ಉಪವಿಭಾಗದ ಸಂಚಾರ ಪೊಲೀಸರು ಮೂವರು ಸವಾರರನ್ನು ಬಂಧಿಸಿದ್ದಾರೆ.

ಬ್ಯಾಟರಾಯನಪುರದ ಇಬ್ರಾಹಿಂ ಪಾಷಾ(19), ಮಾಗಡಿ ರಸ್ತೆಯ ಚರಣ್‌(20) ಮತ್ತು ಮನೀಶ್‌(21) ಬಂಧಿತರು. ಆರೋಪಿಗಳಿಂದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್‌ ಮಾಡುವವರ ಹಾವಳಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣ ಮತ್ತು ಸಾರ್ವಜನಿಕರ ಮಾಹಿತಿ ಆಧರಿಸಿ ವ್ಹೀಲಿಂಗ್‌ ಮಾಡುವವರ ಪತ್ತೆಗೆ ಸಂಚಾರ ಪಶ್ಚಿಮ ಉಪವಿಭಾಗದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ಪೊಲೀಸರ ಈ ತಂಡಗಳು ಭಾನುವಾರ ಕಾರ್ಯಾಚರಣೆ ನಡೆಸಿ ಮೂವರು ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.

ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಠಾಣೆಯಲ್ಲಿ ಒಂದು ಮತ್ತು ಮಾಗಡಿ ರಸ್ತೆ ಸಂಚಾರ ಠಾಣೆಯಲ್ಲಿ ಎರಡು ಸೇರಿ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ.ಹದ್ದಣ್ಣವರ್‌ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ : ಪರಂ ಭರವಸೆ
5 ಪಾಲಿಕೆಗೆ ಜಿಎಸ್‌ಟಿಯಲ್ಲಿ ಪಾಲು ಕೊಡಲು ಆಯೋಗ ಶಿಫಾರಸು