ಬೈಕ್‌ಗಳ ಮುಖಾಮುಖಿ ಡಿಕ್ಕಿ: ವ್ಯಕ್ತಿ ಸಾವು

KannadaprabhaNewsNetwork |  
Published : Oct 27, 2023, 12:30 AM IST

ಸಾರಾಂಶ

ಸಂಡೂರು ತಾಲೂಕಿನ ತುಮಟಿ ಗ್ರಾಮದ ರೇವಣಸಿದ್ದಪ್ಪ(27) ಮೃತಪಟ್ಟ ವ್ಯಕ್ತಿ.

ಕುರುಗೋಡು: ತಾಲೂಕಿನ ದಮ್ಮೂರು ಗ್ರಾಮದ ಬಳಿ ಎರಡು ಬೈಕ್‌ಗಳ ಮಧ್ಯೆ ಜರುಗಿದ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಗುರುವಾರ ಜರುಗಿದೆ. ಸಂಡೂರು ತಾಲೂಕಿನ ತುಮಟಿ ಗ್ರಾಮದ ರೇವಣಸಿದ್ದಪ್ಪ(27) ಮೃತಪಟ್ಟ ವ್ಯಕ್ತಿ. ದಮ್ಮೂರು ಗ್ರಾಮದಲ್ಲಿರುವ ಹೆಂಡತಿ ಮನೆಗೆ ಬಂದಿದ್ದ ರೇವಣಸಿದ್ದಪ್ಪ ಗ್ರಾಮದಿಂದ ಕೋಳೂರು ಕ್ರಾಸ್‌ ಕಡೆಗೆ ಬೈಕ್‌ನಲ್ಲಿ ಬರುವ ಸಂದರ್ಭದಲ್ಲಿ ಸಿರುಗುಪ್ಪ ಕಡೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ರೇವಣಸಿದ್ದಪ್ಪ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟರು. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ