ಬಿಳಿಗೇರಿ: ಶ್ರೀ ಭಗವತಿ ಉತ್ಸವ ಸಂಪನ್ನ

KannadaprabhaNewsNetwork |  
Published : Mar 30, 2025, 03:03 AM IST
ಚಿತ್ರ : 28ಎಂಡಿಕೆ1 : ಬಿಳಿಗೇರಿಯ ಶ್ರೀ ಭಗವತಿ ಉತ್ಸವ ನಡೆಯಿತು.  | Kannada Prabha

ಸಾರಾಂಶ

ಬಿಳಿಗೇರಿ ಗ್ರಾಮದ ಪುರಾತನ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ ವಿಶೇಷ ಪೂಜಾ ಕಾರ್ಯಕ್ರಮ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಪುರಾತನ ಶ್ರೀ ಭಗವತಿ ದೇವಾಲಯದ ವಾರ್ಷಿಕೋತ್ಸವ ವಿಶೇಷ ಪೂಜಾ ಕಾರ್ಯ, ತೆರೆಗಳ ದರ್ಶನ, ದೇವರ ಅವಭೃತ ಸ್ನಾನ ಮತ್ತು ನೃತ್ಯ ಬಲಿಯೊಂದಿಗೆ ಶ್ರದ್ಧಾ ಭಕ್ತಿಯಿಂದ ಬುಧವಾರ ಸಂಪನ್ನಗೊಂಡಿತು.

ಮಾ.22ರಂದು ಮಹಾಗಣಪತಿ ಹೋಮದೊಂದಿಗೆ ಆರಂಭಗೊಂಡ ಉತ್ಸವದಲ್ಲಿ ತಕ್ಕರ ಮನೆಯಿಂದ ಭಂಡಾರ ತರುವುದು, ಅಂದಿ ಬೆಳಕು, ದೇವರ ನೃತ್ಯ ಬಲಿ, ಶ್ರೀ ಪರದೇವರ ಕೋಟದಲ್ಲಿ ಕೊಟ್ಟಿ ಪಾಡುವ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳು ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೇವತಾ ಕಾರ್ಯಗಳು ತಂತ್ರಿಗಳಾದ ಉದಯ ಕುಮಾರ್ ಹುಲಿತಾಳ ನೇತೃತ್ವದಲ್ಲಿ, ಕುಮಾರ್, ಪ್ರಶಾಂತ್ ಬಟ್ಟೆಮಕ್ಕಿ ಸಹಕಾರದೊಂದಿಗೆ ನಡೆಯಿತು.

ಉತ್ಸವ ನಾಲ್ಕನೇ ದಿನವಾದ ಮಂಗಳವಾರದ ದೊಡ್ಡ ಹಬ್ಬದಂದು ಬೆಳಗ್ಗೆ ದೇವರ ನೃತ್ಯ ಬಲಿ, ಶ್ರೀ ಪರದೇವರ ಕೋಟದಿಂದ ದೇವರ ಮುಡಿ ಮಲಿಯಪಟ್ಟಿಗೆ ಬರುವುದು, ಶೀ ಅಯ್ಯಪ್ಪ ದೇವರ ಭಂಡಾರ ತರುವುದು, ಎತ್ತು ಪೋರಾಟ, ಹಬ್ಬದ ಕಟ್ಟು ಮುರಿಯುವುದು, ತೆಂಗೆಪೋರು, ಬೆಳಕು, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಮಧ್ಯಾಹ್ನದ ಬಳಿಕ ದೇವರ ಪ್ರದಕ್ಷಿಣೆ ನೃತ್ಯ ಬಲಿ ನಡೆದು, ಶೀ ಪರದೇವರ, ಶ್ರೀ ಅಯ್ಯಪ್ಪ ದೇವರ, ಕುಟ್ಟಿಚಾತ ದೇವರ ತೆರೆ ಕಾರ್ಯಕ್ರಮ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು. ಬುಧವಾರ ಸಂಜೆ ಬೆಳಕು, ದೇವರು ಬಲಿ ಬರುವುದು, ದೇವರ ಜಳಕ, ದೇವರ ನೃತ್ಯ ಬಲಿ, ಅನ್ನಸಂತರ್ಪಣೆ ಮತ್ತು ಮಂತ್ರಾಕ್ಷತೆ ಕಾರ್ಯಗಳೊಂದಿಗೆ ಉತ್ಸವ ಸಂಪನ್ನಗೊಂಡಿತು. ಉತ್ಸವದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ