ಬಿಂಡಳ್ಳಿ ಕೃಷಿ ಪತ್ತಿನ ಸಂಘದ ಚುನಾವಣೆ: 9 ಮಂದಿ ಜೆಡಿಎಸ್ ಬೆಂಬಲಿತರು ಆಯ್ಕೆ

KannadaprabhaNewsNetwork |  
Published : Apr 19, 2025, 12:38 AM IST
17ಕೆಎಂಎನ್ ಡಿ12 | Kannada Prabha

ಸಾರಾಂಶ

ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಬಿಂಡಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 9 ಮಂದಿ ಆಯ್ಕೆಯಾದರು.

ಸಂಘದ 11 ಸ್ಥಾನಗಳ ಪೈಕಿ ಜೆಡಿಎಸ್ ಬೆಂಬಲಿತರು 9 ಸ್ಥಾನ ಪಡೆದು ಆಡಳಿತ ಚುಕ್ಕಾಣಿ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕೈಬಲಪಡಿಸಿದ್ದಾರೆ.

ಚುನಾವಣೆಯಲ್ಲಿ ಚಲುವೇಗೌಡ ಬನ್ನಂಗಾಡಿ ಅವಿರೋಧ, ಚಿಕ್ಕತಮ್ಮಯ್ಯ ಡಿಂಕಾಶೆಟ್ಟಳ್ಳಿ, ಬಿ.ಸಿ ಜಗದೀಶ್ ಡಿಂಕಾ, ಬಿ.ಡಿ.ದೊಡೇಗೌಡ ಬನ್ನಂಗಾಡಿ, ದೇವೇಗೌಡ ಗಿರಿಯಾರಳ್ಳಿ, ರತ್ನಮ್ಮ ಬನ್ನಂಗಾಡಿ, ರಾಮೇಗೌಡ ಬಿಂಡಳ್ಳಿ, ಶಿವಲಿಂಗಯ್ಯ ಅಂತನಹಳ್ಳಿ, ಪಂಕಜ ಮಲ್ಲಿಗೆರೆ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವರಿಂದ ಅಭಿನಂದನೆ:

ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲಾ ಜೆಡಿಎಸ್ ಬೆಂಬಲಿತ ನಿರ್ದೇಶಕರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿ ಮಾತನಾಡಿ, ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಆಯ್ಕೆಯಾಗಿರುವ ಎಲ್ಲಾ ನೂತನ ನಿರ್ದೇಶಕರಿಗೆ ಅಭಿನಂಧನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲರು ಜತೆಗೂಡಿ ರೈತರ ಪ್ರಗತಿಗೆ ಪೂರಕವಾಗಿ ಕೆಲಸ ಮಾಡಬೇಕು, ಸರಕಾರಗಳಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಜೆಡಿಎಸ್ ಪಕ್ಷದ ಮುಖಂಡರಾದ ಬಿ.ಪಿ.ಶ್ರೀನಿವಾಸ್, ಹುಚ್ಚೇಗೌಡ, ಯಶವಂತ್‌ಕುಮಾರ್, ಕರಿಗೌಡ, ಗಂಗಾಧರ್, ಧರಣಿ, ರವಿಕರ, ಪ್ರಕಾಶ್, ನಿವೃತ ಶಿಕ್ಷಕ ಶಿವಪ್ಪ, ಪುಟ್ಟರಾಜು, ಗಿರಿಯಾರಳ್ಳಿವಾಸು ಸೇರಿದಂತೆ ಡಿಂಕಾ ಬನ್ನಂಗಾಡಿ ಗ್ರಾಮದ ಎಲ್ಲಾ ಮುಖಂಡರುಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ