)
ಕನ್ನಡಪ್ರಭ ವಾರ್ತೆ ಬೆಂಗಳೂರು
ಜೈಲಿನ ಪ್ರತಿ ಬ್ಯಾರಕ್, ಸಂದರ್ಶಕರ ಕೊಠಡಿ, ಆಸ್ಪತ್ರೆ, ಕ್ಯಾಂಟೀನ್, ಅಡುಗೆ ಕೋಣೆ, ಗ್ರಂಥಾಲಯ, ಮೈದಾನ, ಕರಕುಶಲ ಕೈಗಾರಿಕೆಗಳು ಹಾಗೂ ಬೇಕರಿ ಸೇರಿದಂತೆ ಇತೆರೆ ಬಯೋಮೆಟ್ರಿಕ್ ಅಳವಡಿಸಲಾಗಿದೆ. ಆ ಪ್ರದೇಶಳ ಪ್ರವೇಶ ಹಾಗೂ ನಿರ್ಗಮನದ ವೇಳೆ ಸಜಾ ಹಾಗೂ ವಿಚಾರಣಾಧೀನ ಕೈದಿಗಳು ಬಯೋಮೆಟ್ರಿಕ್ ಬಳಸಬೇಕಿದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
10 ದಿನ ಕೈದಿಗಳಿಗೆ ಜೈಲಿನಲ್ಲಿ ಧ್ಯಾನ ಶಿಬಿರ:ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ 10 ದಿನಗಳ ವಿಶೇಷ ಧ್ಯಾನ ಶಿಬಿರವನ್ನು ಕಾರಾಗೃಹ ಅಧಿಕಾರಿಗಳು ಆಯೋಜಿಸಿದ್ದಾರೆ. ಶ್ರೀ ಸತ್ಯನಾರಾಯಣ ಗೋಯೆಂಕಾ ಅವರ ವಿಪಶ್ಯನ ಧ್ಯಾನ ಮತ್ತು ಸಂಶೋಧನಾ ಕೇಂದ್ರದ ಸಹಭಾಗಿತ್ವದಲ್ಲಿ ಥ್ಯಾನ ತರಬೇತಿ ಆಯೋಜಿಸಲಾಗಿದ್ದು, ಮೊದಲ ಹಂತದಲ್ಲಿ ಕಾರ್ಯಾಗಾರದಲ್ಲಿ 25 ಕೈದಿಗಳು ಪಾಲ್ಗೊಂಡಿದ್ದಾರೆ. ಸಮಾಜದಲ್ಲಿ ಸಮತಾಭಾವದಿಂದ ಬದುಕುವುದು ಮತ್ತು ಶಾಂತಿ ವಾತಾವರಣ ನಿರ್ಮಿಸುವ ಕುರಿತು ಕೈದಿಗಳಿಗೆ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.