ಅಂಬೇಡ್ಕರ್ ಜನ್ಮದಿನ: 14ರಂದು ಮನೆ ಮನದ ಹಬ್ಬವಾಗಿ ಆಚರಣೆ

KannadaprabhaNewsNetwork |  
Published : Apr 11, 2025, 12:31 AM IST
ಸುದ್ದಿಗೋಷಿ ಸಂದರ್ಭ | Kannada Prabha

ಸಾರಾಂಶ

ಡಾ. ಅಂಬೇಡ್ಕರ್‌ ಅವರ ಜನ್ಮದಿನವನ್ನು ಮನೆ ಮನದ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಎಚ್‌ ಬಿ ಗಣೇಶ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಈ ತಿಂಗಳ 14ರಂದು ಡಾ. ಅಂಬೇಡ್ಕರ್ ಅವರ ಜನ್ಮದಿನವನ್ನು ಮನೆ ಮನದ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಎಚ್ ಬಿ ಗಣೇಶ್ ತಿಳಿಸಿದ್ದಾರೆ.

ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಏಪ್ರಿಲ್ 14 ಇಡೀ ವಿಶ್ವವೇ ಸಂಭ್ರಮಿಸುವ ದಿನವಾಗಿದ್ದು ಅಂಬೇಡ್ಕರ್ ಅವರ ಸಾಧನೆಗಳನ್ನು ಸ್ಮರಿಸಿ ಯುವ ಜನಾಂಗಕ್ಕೆ ಸಮಗ್ರ ಮಾಹಿತಿ ಒದಗಿಸುವ ದಿನವಾಗಿದೆ ಎಂದು ಹೇಳಿದರು.

ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಿ ಅವರ ಆಶಯದ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಪಣತೊಡಬೇಕಾಗಿದೆ. ವಿಶೇಷವಾಗಿ ಭಾರತ ದೇಶದ ಶೋಷಿತ ಜನ ಅವರನ್ನು ನೆನೆಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಣೆಯಲ್ಲಿ ತೊಡಗಬೇಕಾಗಿದೆ ಎಂದರು.

ಈ ಸಂಬಂಧ ಈಗಾಗಲೇ ಸಂಘದ ವತಿಯಿಂದ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು.

ದಲಿತ ಮುಖಂಡರು ಮತ್ತು ಸಂಘದ ಪ್ರಮುಖರಾದ ಕೆ ಬಿ ರಾಜು ಮಾತನಾಡಿ, ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರತಿ ಗ್ರಾಮ ಗ್ರಾಮಗಳಲ್ಲಿ ಅದ್ದೂರಿಯಾಗಿ ಆಚರಣೆಯಾಗಬೇಕು. ಆ ದಿನವನ್ನು ಮದ್ಯಪಾನ ಮುಕ್ತ ದಿನವನ್ನಾಗಿ ಸರ್ಕಾರ ಘೋಷಿಸಬೇಕು. ಕಾರ್ಯಕ್ರಮಗಳು ಜಾತಿಗಳಿಗೆ ಸೀಮಿತವಾಗದೆ ವಿವಿಧ ಕಾರ್ಯಕ್ರಮಗಳೊಂದಿಗೆ ಪ್ರತಿಯೊಬ್ಬರೂ ಸಂಭ್ರಮಿಸುವಂತಾಗಬೇಕು ಎಂದರು.

ಸಂಘದ ನಿರ್ದೇಶಕರಾದ ಎಚ್ ಡಿ ಚಂದ್ರು ಅವರು ಮಾತನಾಡಿ, ಸರಕಾರಿ ಕಾರ್ಯಕ್ರಮಗಳ ಹೊರತಾಗಿ ತಾಲೂಕಿನಾದ್ಯಂತ ಎಲ್ಲಾ ಜನರು ಒಟ್ಟಿಗೆ ಸೇರಿ ಸಂಘ ಸಂಸ್ಥೆಗಳು ಅಂದು ಮನೆಮನ ಹಬ್ಬ ಯಶಸ್ವಿಗೊಳಿಸುವಂತೆ ಕೋರಿದರು.

ಇದೇ ವೇಳೆ ಅಂಬೇಡ್ಕರ್ ಹುಟ್ಟುಹಬ್ಬ ಸಲುವಾಗಿ ಪ್ರಕಟಿಸಿದ ಮನೆ ಮನದ ಹಬ್ಬ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಕೆಎಸ್ ರವಿ, ಎಸ್ ಎಸ್ ಸಂಗಮೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ