ಕನ್ನಡಪ್ರಭ ವಾರ್ತೆ ಮಂಡ್ಯ
ಮೊದಲಿಗೆ ನಗರದ ಶ್ರೀವಿದ್ಯಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿ.ಪಿ.ಉಮೇಶ್, ಮಂಡ್ಯ ಜಿಲ್ಲೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಕೊಡುಗೆ ಅಪಾರವಾಗಿದೆ. ಉಪಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್ಗೆ ೨ ಕೋಟಿ ರು. ವೆಚ್ಚದ ಸಾಧನ ಸಲಕರಣೆಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ರಾಜಕೀಯ ಅಧಿಕಾರ ದೊರೆತು ರಾಜ್ಯದ ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸಿದರು.
ಬಳಿಕ ಬಿಜೆಪಿ ನಗರಾಧ್ಯಕ್ಷ ವಸಂತ್ಕುಮಾರ್ ನೇತೃತ್ವದಲ್ಲಿ ನಗರದ ಜಿಲ್ಲಾಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆಯ ಎಲ್ಲಾ ವಾರ್ಡ್ಗಳಿಗೆ ತೆರಳಿ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದರು. ನಗರದ ಸೇವಾಕಿರಣ ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಬಟ್ಟೆಯನ್ನು ವಿತರಿಸಲಾಯಿತು.ಬಿಜೆಪಿ ಮುಖಂಡರಾದ ಚಾಮರಾಜು, ನಾಗಾನಂದ್, ರಮೇಶ್, ಕ್ರಾಂತಿ ಮಂಜು, ಮನು, ಸೋಮಶೇಖರ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಕನ್ನಡ ಪ್ರಭ ವಾರ್ತೆ ಮಳವಳ್ಳಿ
ನಂತರ ಹೊರವಲಯದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳಿದ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಪುರಸಭೆ ಸದಸ್ಯ ರವಿ, ನಗರ ಘಟಕದ ಅಧ್ಯಕ್ಷ ವೇಣು, ಮುಖಂಡರಾದ ಮಂಜುನಾಥ್, ಶಿವಲಿಂಗಪ್ಪ, ಗೋವಿಂದ, ಸ್ವಾಮಿ, ಗಂಗಾ, ದೇವರಾಜು, ಕಾಂತರಾಜು, ರಮೇಶ್, ಚಂದು, ರವಿ, ಸಲೀಂ ಪಾಷ, ಶಿವಪ್ರಸಾದ್, ಮಂಜು, ಜಗದೀಶ್, ರವಿ, ಚಿಕ್ಕಣ್ಣ, ಮಹೇಶ್ ಇದ್ದರು.