ಹಣ್ಣು ಹಂಪಲು ವಿತರಸಿ ಮಾಜಿ ಸಚಿವ ಕೋಟೆ ಶಿವಣ್ಣ ಹುಟ್ಟುಹಬ್ಬ ಆಚರಣೆ

KannadaprabhaNewsNetwork |  
Published : May 09, 2024, 01:10 AM IST
 ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಅವರ  ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ತಾಲೂಕಿನ ಉತ್ತುವಳ್ಳಿಯ ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟ್‌ ನ ವೃದ್ದ ಮತ್ತು ಅನಾಥಶ್ರಮದ ವೃದ್ದರಿಗೆ ಹಣ್ಣು -ಹಂಪಲು ವಿತರಿಸಲಾಯಿತು. | Kannada Prabha

ಸಾರಾಂಶ

ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ತಾಲೂಕಿನ ಉತ್ತುವಳ್ಳಿಯ ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟ್‌ ನ ವೃದ್ಧ ಮತ್ತು ಅನಾಥಶ್ರಮದ ವೃದ್ದರಿಗೆ ಹಣ್ಣು -ಹಂಪಲು ವಿತರಿಸಲಾಯಿತು. ಅಭಿಮಾನಿ ಬಳಗದ ಮುಖಂಡ, ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ ಅವರ ನೇತೃತ್ವದಲ್ಲಿ ಹಣ್ಣು- ಹಂಪಲು ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ತಾಲೂಕಿನ ಉತ್ತುವಳ್ಳಿಯ ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟ್‌ ನ ವೃದ್ದ ಮತ್ತು ಅನಾಥಶ್ರಮದ ವೃದ್ದರಿಗೆ ಹಣ್ಣು -ಹಂಪಲು ವಿತರಿಸಲಾಯಿತು. ಅಭಿಮಾನಿ ಬಳಗದ ಮುಖಂಡ, ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ ಅವರ ನೇತೃತ್ವದಲ್ಲಿ ಹಣ್ಣು- ಹಂಪಲು ವಿತರಿಸಲಾಯಿತು.

ಈ ವೇಳೆ ಬಸವನಪುರ ರಾಜಶೇಖರ ಮಾತನಾಡಿ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಅವರು ದಕ್ಷ, ಪ್ರಾಮಾಣಿಕ ರಾಜಕಾರಣಿಯಾಗಿ ಸುಮಾರು 40ಗಳಿಂದ ಸೇವೆ ಮಾಡಿಕೊಂಡು ಬಂದಿದ್ದಾರೆ ಅವರಿಗೆ ಶ್ರೀಮಹದೇಶ್ವರ, ಶ್ರೀಮಂಟೇಸ್ವಾಮಿ, ಸಿದ್ದಪ್ಪಾಜಿ, ಬಿಳಿಗಿರಂಗಸ್ವಾಮಿ, ಶ್ರೀಚಾಮರಾಜೇಶ್ವರಸ್ವಾಮಿ ಮುಂದಿನ ದಿನಗಳಲ್ಲಿ ಹೆಚ್ಚಿನ ಆಯಸ್ಸು, ಆರೋಗ್ಯ ಹಾಗೂ ಉನ್ನತ ರಾಜಕೀಯ ಸ್ಥಾನಮಾನ ಕರಣಿಸಲಿ ಎಂದು ಆಶಿಸಿದರು.ವೃದ್ದರೊಡನೆ ಕೋಟೆ ಎಂ.ಶಿವಣ್ಣ ಅವರ ಹುಟ್ಟುಹಬ್ಬ ಆಚರಣೆ ಮಾಡುವುದು ಒಂದು ವಿಶೇಷ, ಅರ್ಥ ಪೂರ್ಣ ವಾಗಿದೆ ಎಂದರು. ಈ ವೇಳೆ ಯರಗಂಬಳ್ಳಿ ಪರಶಿವಮೂರ್ತಿ, ಸಂತೇಮರಹಳ್ಳಿ ರಾಜು, ಮಾದಿಗ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಶಿವಕುಮಾರ್, ಕೆಸ್ತೂರುಮರಪ್ಪ, ವೀರಶೈವ ಮುಖಂಡ ರಾಜು, ಟ್ರಸ್ಟ್ ಅಧ್ಯಕ್ಷ ರಮೇಶ್ ಪ್ರಭು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!