ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಜೂನ್ 2ರಂದು ವಿವಿಧ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಜ್-ಕ್ವಿಜ್ ಸ್ಪರ್ಧೆ ನಡೆಸಲಾಯಿತು. ಇದರಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ಗೆದ್ದುಕೊಂಡರು.
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಜೂನ್ 2ರಂದು ವಿವಿಧ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಜ್-ಕ್ವಿಜ್ ಸ್ಪರ್ಧೆ ನಡೆಸಲಾಯಿತು. ಇದರಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ಗೆದ್ದುಕೊಂಡರು.ಸಮಾರೋಪ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ಮೆಲ್ವಿನ್ ಡಿಸೋಜ, ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿನ್ನು ಅಭಿನಂದಿಸಿದರು. ಎಂಬಿಎ ವಿಭಾಗ ಮುಖ್ಯಸ್ಥೆ ಡಾ. ಸುಚಿತ್ರಾ, ತಮ್ಮ ಪ್ರಸ್ತಾವಿಕ ಭಾಷಣದಲ್ಲಿ ಸ್ಪರ್ಧೆಯ ವಿವಿಧ ಹಂತಗಳನ್ನು ವಿವರಿಸಿದರಲ್ಲದೆ ಆಡಳಿತ ಮಂಡಳಿಯ ಪ್ರೋತ್ಸಾಹವನ್ನು ನೆನಪಿಸಿಕೊಂಡರು.
ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ನೀಲ್, ಕ್ವಿಜ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸಿದರು. ಎಂಬಿಎ ವಿದ್ಯಾರ್ಥಿಗಳಾದ ಸಹರಾ ಕಾರ್ಯಕ್ರಮ ನಿರೂಪಿಸಿದರು. ಶಾಂಭವಿ ವಂದಿಸಿದರು.ವಿಶ್ವ ತಂಬಾಕು ದಿನಾಚರಣೆ:
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ವಿಶ್ವ ತಂಬಾಕು ನಿಷೇಧ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಪ್ರಥಮ ಎಂಬಿಎ ವಿಭಾಗದ ವಿದ್ಯಾರ್ಥಿಗಳು ತಂಬಾಕಿನಿಂದಾಗುವ ದುಷ್ಟಪರಿಣಾಮಗಳನ್ನು ತೋರಿಸುವ ಒಂದು ಕಿರು ನಾಟಕವನ್ನು ಪ್ರದರ್ಶಿಸುವ ಮೂಲಕ ಜನಜಾಗೃತಿಯನ್ನು ಮೂಡಿಸಿದರು.
ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಜನಜಾಗೃತಿ ಮೂಡಿಸುವ ಪ್ರಯತ್ನವನ್ನು ಹೊಗಳಿದರು. ಸಹ ಪ್ರಾಧ್ಯಾಪಕಿ ಚೈತಾಲಿ ಕಾರ್ಯಕ್ರಮ ನಿರ್ವಹಿಸಿದರು. ವಿಭಾಗದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.