ಅಳ್ನಾವರ:
ಕೇಂದ್ರ ಸರ್ಕಾರವೇ ಜಿಎಸ್ಟಿ ಹೆಚ್ಚಿಸಿ ಇದೀಗ ತಾವೇ ಕಡಿಮೆ ಮಾಡುವ ಮೂಲಕ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ಜಿಎಸ್ಟಿ ಆರಂಭದಿಂದ ಈ ವರೆಗೆ ಪ್ರತಿ ತಿಂಗಳು ₹ 1.27 ಲಕ್ಷ ಕೋಟಿಗೂ ಅಧಿಕ ಕ್ರೋಡೀಕರಣವಾಗಿದೆ. ಅದರಲ್ಲಿ ಶೇ.60ರಷ್ಟು ಬಡವರು ಜಿಎಸ್ಟಿ ಕಟ್ಟಿದ್ದಾರೆ. ಇದರಿಂದ ಒಳಹರಿವಿನ ಸಹಾಯಧನ ಯಾವುದು ಇಲ್ಲ ಎಂದಿರುವ ಸಚಿವರು, ಮತಗಳ್ಳತನ, ಭ್ರಷ್ಟಾಚಾರ, ಕಾರ್ಯಕ್ಷಮತೆ ಇಲ್ಲದೆ ಇರುವುದು ಹಾಗೂ ವಿದೇಶದಲ್ಲಿ ಭಾರತಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿಡಲು ಜಿಎಸ್ಟಿ ಕಡಿಮೆ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದರು.
ಮುಖ್ಯಮಂತ್ರಿ ಬದಲಾವಣೆಗೆ ಕುರಿತು ಕೇಳಿದ ಪ್ರಶ್ನೆಗೆ, ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ಆಡಳಿತದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಲಾಡ್ ಸ್ಪಷ್ಟಪಡಿಸಿದರು.ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶಗೌಡ ಕರಿಗೌಡರ, ಶ್ರೀಕಾಂತ ಗಾಯಕವಾಡ, ವಶಿಂ ಪಠಾಣ, ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವಿನಾಯಕ ಕುರುಬರ, ಅನ್ವರಖಾನ್ ಬಾಗೇವಾಡಿ ಸೇರಿದಂತೆ ಇತರರು ಇದ್ದರು.