ದೇಶವನ್ನು ಮಾರಾಟದ ಹಂತಕ್ಕೆ ತಂದ ಬಿಜೆಪಿ

KannadaprabhaNewsNetwork |  
Published : Oct 05, 2025, 01:01 AM IST
ಸಂತೋಷ ಲಾಡ್‌ | Kannada Prabha

ಸಾರಾಂಶ

ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶದ ಸಾಲ, ಬಂಗಾರ, ದಿನಗೂಲಿ ವ್ಯವಸ್ಥೆ ಹಾಗೂ ಡಾಲರ್‌ ಹೆಚ್ಚಳದಿಂದ ದೇಶವನ್ನು ಮಾರಾಟಕ್ಕೆ ತಂದು ನಿಲ್ಲಿಸಿದ್ದಾರೆ ಎಂದು ಸಚಿವ ಸಂತೋಷ ಲಾಡ್‌ ಕಿಡಿಕಾರಿದ್ದಾರೆ.

ಅಳ್ನಾವರ:

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕಕಕ್ಕೆ ಮಾತ್ರವಲ್ಲದೆ ದೇಶಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಸಚಿವ ಸಂತೋಷ ಲಾಡ್‌, ದೇಶವನ್ನು ಮಾರಾಟದ ಹಂತಕ್ಕೆ ಬಿಜೆಪಿ ತಂದು ನಿಲ್ಲಿಸಿದೆ ಎಂದು ಕಿಡಿಕಾರಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶದ ಸಾಲ, ಬಂಗಾರ, ದಿನಗೂಲಿ ವ್ಯವಸ್ಥೆ ಹಾಗೂ ಡಾಲರ್‌ ಹೆಚ್ಚಳದಿಂದ ದೇಶವನ್ನು ಮಾರಾಟಕ್ಕೆ ತಂದು ನಿಲ್ಲಿಸಿದ್ದಾರೆ ಎಂದು ದೂರಿದರು.

ಕೇಂದ್ರ ಸರ್ಕಾರವೇ ಜಿಎಸ್‌ಟಿ ಹೆಚ್ಚಿಸಿ ಇದೀಗ ತಾವೇ ಕಡಿಮೆ ಮಾಡುವ ಮೂಲಕ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ಜಿಎಸ್‌ಟಿ ಆರಂಭದಿಂದ ಈ ವರೆಗೆ ಪ್ರತಿ ತಿಂಗಳು ₹ 1.27 ಲಕ್ಷ ಕೋಟಿಗೂ ಅಧಿಕ ಕ್ರೋಡೀಕರಣವಾಗಿದೆ. ಅದರಲ್ಲಿ ಶೇ.60ರಷ್ಟು ಬಡವರು ಜಿಎಸ್‌ಟಿ ಕಟ್ಟಿದ್ದಾರೆ. ಇದರಿಂದ ಒಳಹರಿವಿನ ಸಹಾಯಧನ ಯಾವುದು ಇಲ್ಲ ಎಂದಿರುವ ಸಚಿವರು, ಮತಗಳ್ಳತನ, ಭ್ರಷ್ಟಾಚಾರ, ಕಾರ್ಯಕ್ಷಮತೆ ಇಲ್ಲದೆ ಇರುವುದು ಹಾಗೂ ವಿದೇಶದಲ್ಲಿ ಭಾರತಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿಡಲು ಜಿಎಸ್‌ಟಿ ಕಡಿಮೆ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದರು.

ಮುಖ್ಯಮಂತ್ರಿ ಬದಲಾವಣೆಗೆ ಕುರಿತು ಕೇಳಿದ ಪ್ರಶ್ನೆಗೆ, ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ಆಡಳಿತದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಲಾಡ್‌ ಸ್ಪಷ್ಟಪಡಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಸುರೇಶಗೌಡ ಕರಿಗೌಡರ, ಶ್ರೀಕಾಂತ ಗಾಯಕವಾಡ, ವಶಿಂ ಪಠಾಣ, ಗ್ಯಾರಂಟಿ ಯೋಜನೆಯ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವಿನಾಯಕ ಕುರುಬರ, ಅನ್ವರಖಾನ್‌ ಬಾಗೇವಾಡಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ